1:19 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕೂಳೂರು ನೂತನ ಸೇತುವೆ ಕಾಮಗಾರಿ 3 ವರ್ಷಗಳಿಂದ ನನೆಗುದಿಗೆ: ಸಿಪಿಎಂ ಪ್ರತಿಭಟನೆ

10/03/2023, 20:43

ಮಂಗಳೂರು(reporterkarnataka.com): ಕೂಳೂರು ನದಿ ಸೇತುವೆ ಕಾಮಗಾರಿ ಪ್ರಾರಂಭವಾಗಿ ಮೂರು ವರ್ಷ ಕಳೆದಿದೆ. ಹಳೆ ಸೇತುವೆ ಅಸಮರ್ಥ ಎಂದು ಹೆದ್ದಾರಿ ಪ್ರಾಧಿಕಾರದ ತಜ್ಞರು ವರದಿ ನೀಡಿ ನಾಲ್ಕು ವರ್ಷ ದಾಟಿದೆ. ಮಳೆಗಾಲ ಸಮೀಪಿಸುತ್ತಿದ್ದು ನದಿ ಸೇತುವೆ ಕಾಮಗಾರಿಗೆ ಹಾಕಿರುವ ಭಾರೀ ಮಣ್ಣಿನ ಪ್ರಮಾಣದಿಂದ ಕೂಳೂರು ನದಿ ಪಾತ್ರದ ಪ್ರದೇಶಕ್ಕೆ ಮಳೆ ನೀರು ನಗ್ಗುವ ಅಪಾಯ ಒಂದೆಡೆಯಾದರೆ, ಹಳೆ ಸೇತುವೆ ಕುಸಿಯುವ ಭೀತಿ ಇನ್ನೊಂದೆಡೆ. ಆದುದರಿಂದ ಕಾಮಗಾರಿಯನ್ನು ಶೀಘ್ರವಾಗಿ ನಡೆಸಬೇಕು ಎಂದು ಒತ್ತಾಯಿಸಿ ಇಂದು ಸಿಪಿಎಂ ಪಂಜಿಮೊಗರು ವಲಯ ಸಮಿತಿ‌ ಕೂಳೂರು ಸೇತುವೆ ಬಳಿ ಪ್ರತಿಭಟನೆ ನಡೆಸಿತು.


ಪ್ರತಿಭಟನೆ ಉದ್ದೇಶಿಸಿ ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ, ಕೂಳೂರು ಸೇತುವೆ ಕಾಮಗಾರಿ ಮೂರು ವರ್ಷಗಳಿಂದ ಕುಂಟುತ್ತಾ ಸಾಗುತ್ತಿದೆ. ಇದು ಮತ್ತೊಂದು ಪಂಪ್ವೆಲ್ ಆಗದಿರಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ‌. ಇಮ್ತಿಯಾಝ್ ಮಾತನಾಡಿ, ಸ್ಥಳೀಯ ಶಾಸಕರಿಗೆ ಕಾಮಗಾರಿ ನಡೆಸುವ ಆಸಕ್ತಿ ಇಲ್ಲ. ಸುರತ್ಕಲ್ ಟೋಲ್ ಬಂದ್ ಮಾಡಿ ನೂರು ದಿನಗಳು‌ ಕಳೆದರೂ ಕೂಡ ಅಲ್ಲಿ ಟೋಲ್ ಗೂಡುಗಳು ಅಸ್ಥಿಪಂಜರದ ರೀತಿ ಉಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಿಪಿಐಎಂ ಪಂಜಿಮೊಗರು ಮುಖಂಡರಾದ ಅನಿಲ್, ಪ್ರಮೀಳಾ, ಸೌಮ್ಯ, ಬಾವು, ಶೆರೀಫ್, ಬಶೀರ್, ಸಂತೋಷ್, ಕಸ್ತೂರಿ, ಫಾತಿಮಾ ಖಲೀಲ್ , ಡಿವೈಎಫ್ಐ ನ ಶ್ರೀನಾಥ್ ಕುಲಾಲ್, ಮಕ್ಸೂದ್ ಕಾನ, ದಲಿತ ಸಂಘಟನೆಯ ಕೃಷ್ಣ ತಣ್ಣೀರುಬಾವಿ ಸಾಮಾಜಿಕ ಮುಂದಾಳುಗಳಾದ ಕನಕದಾಸ್, ಹನೀಫ್ ಕೂಳೂರು ಮತ್ತಿತರರು ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು