11:56 PM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಕೂಳೂರು ನೂತನ ಸೇತುವೆ ಕಾಮಗಾರಿ 3 ವರ್ಷಗಳಿಂದ ನನೆಗುದಿಗೆ: ಸಿಪಿಎಂ ಪ್ರತಿಭಟನೆ

10/03/2023, 20:43

ಮಂಗಳೂರು(reporterkarnataka.com): ಕೂಳೂರು ನದಿ ಸೇತುವೆ ಕಾಮಗಾರಿ ಪ್ರಾರಂಭವಾಗಿ ಮೂರು ವರ್ಷ ಕಳೆದಿದೆ. ಹಳೆ ಸೇತುವೆ ಅಸಮರ್ಥ ಎಂದು ಹೆದ್ದಾರಿ ಪ್ರಾಧಿಕಾರದ ತಜ್ಞರು ವರದಿ ನೀಡಿ ನಾಲ್ಕು ವರ್ಷ ದಾಟಿದೆ. ಮಳೆಗಾಲ ಸಮೀಪಿಸುತ್ತಿದ್ದು ನದಿ ಸೇತುವೆ ಕಾಮಗಾರಿಗೆ ಹಾಕಿರುವ ಭಾರೀ ಮಣ್ಣಿನ ಪ್ರಮಾಣದಿಂದ ಕೂಳೂರು ನದಿ ಪಾತ್ರದ ಪ್ರದೇಶಕ್ಕೆ ಮಳೆ ನೀರು ನಗ್ಗುವ ಅಪಾಯ ಒಂದೆಡೆಯಾದರೆ, ಹಳೆ ಸೇತುವೆ ಕುಸಿಯುವ ಭೀತಿ ಇನ್ನೊಂದೆಡೆ. ಆದುದರಿಂದ ಕಾಮಗಾರಿಯನ್ನು ಶೀಘ್ರವಾಗಿ ನಡೆಸಬೇಕು ಎಂದು ಒತ್ತಾಯಿಸಿ ಇಂದು ಸಿಪಿಎಂ ಪಂಜಿಮೊಗರು ವಲಯ ಸಮಿತಿ‌ ಕೂಳೂರು ಸೇತುವೆ ಬಳಿ ಪ್ರತಿಭಟನೆ ನಡೆಸಿತು.


ಪ್ರತಿಭಟನೆ ಉದ್ದೇಶಿಸಿ ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ, ಕೂಳೂರು ಸೇತುವೆ ಕಾಮಗಾರಿ ಮೂರು ವರ್ಷಗಳಿಂದ ಕುಂಟುತ್ತಾ ಸಾಗುತ್ತಿದೆ. ಇದು ಮತ್ತೊಂದು ಪಂಪ್ವೆಲ್ ಆಗದಿರಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ‌. ಇಮ್ತಿಯಾಝ್ ಮಾತನಾಡಿ, ಸ್ಥಳೀಯ ಶಾಸಕರಿಗೆ ಕಾಮಗಾರಿ ನಡೆಸುವ ಆಸಕ್ತಿ ಇಲ್ಲ. ಸುರತ್ಕಲ್ ಟೋಲ್ ಬಂದ್ ಮಾಡಿ ನೂರು ದಿನಗಳು‌ ಕಳೆದರೂ ಕೂಡ ಅಲ್ಲಿ ಟೋಲ್ ಗೂಡುಗಳು ಅಸ್ಥಿಪಂಜರದ ರೀತಿ ಉಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಿಪಿಐಎಂ ಪಂಜಿಮೊಗರು ಮುಖಂಡರಾದ ಅನಿಲ್, ಪ್ರಮೀಳಾ, ಸೌಮ್ಯ, ಬಾವು, ಶೆರೀಫ್, ಬಶೀರ್, ಸಂತೋಷ್, ಕಸ್ತೂರಿ, ಫಾತಿಮಾ ಖಲೀಲ್ , ಡಿವೈಎಫ್ಐ ನ ಶ್ರೀನಾಥ್ ಕುಲಾಲ್, ಮಕ್ಸೂದ್ ಕಾನ, ದಲಿತ ಸಂಘಟನೆಯ ಕೃಷ್ಣ ತಣ್ಣೀರುಬಾವಿ ಸಾಮಾಜಿಕ ಮುಂದಾಳುಗಳಾದ ಕನಕದಾಸ್, ಹನೀಫ್ ಕೂಳೂರು ಮತ್ತಿತರರು ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು