7:18 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಕೂಳೂರು ನೂತನ ಸೇತುವೆ ಕಾಮಗಾರಿ 3 ವರ್ಷಗಳಿಂದ ನನೆಗುದಿಗೆ: ಸಿಪಿಎಂ ಪ್ರತಿಭಟನೆ

10/03/2023, 20:43

ಮಂಗಳೂರು(reporterkarnataka.com): ಕೂಳೂರು ನದಿ ಸೇತುವೆ ಕಾಮಗಾರಿ ಪ್ರಾರಂಭವಾಗಿ ಮೂರು ವರ್ಷ ಕಳೆದಿದೆ. ಹಳೆ ಸೇತುವೆ ಅಸಮರ್ಥ ಎಂದು ಹೆದ್ದಾರಿ ಪ್ರಾಧಿಕಾರದ ತಜ್ಞರು ವರದಿ ನೀಡಿ ನಾಲ್ಕು ವರ್ಷ ದಾಟಿದೆ. ಮಳೆಗಾಲ ಸಮೀಪಿಸುತ್ತಿದ್ದು ನದಿ ಸೇತುವೆ ಕಾಮಗಾರಿಗೆ ಹಾಕಿರುವ ಭಾರೀ ಮಣ್ಣಿನ ಪ್ರಮಾಣದಿಂದ ಕೂಳೂರು ನದಿ ಪಾತ್ರದ ಪ್ರದೇಶಕ್ಕೆ ಮಳೆ ನೀರು ನಗ್ಗುವ ಅಪಾಯ ಒಂದೆಡೆಯಾದರೆ, ಹಳೆ ಸೇತುವೆ ಕುಸಿಯುವ ಭೀತಿ ಇನ್ನೊಂದೆಡೆ. ಆದುದರಿಂದ ಕಾಮಗಾರಿಯನ್ನು ಶೀಘ್ರವಾಗಿ ನಡೆಸಬೇಕು ಎಂದು ಒತ್ತಾಯಿಸಿ ಇಂದು ಸಿಪಿಎಂ ಪಂಜಿಮೊಗರು ವಲಯ ಸಮಿತಿ‌ ಕೂಳೂರು ಸೇತುವೆ ಬಳಿ ಪ್ರತಿಭಟನೆ ನಡೆಸಿತು.


ಪ್ರತಿಭಟನೆ ಉದ್ದೇಶಿಸಿ ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ, ಕೂಳೂರು ಸೇತುವೆ ಕಾಮಗಾರಿ ಮೂರು ವರ್ಷಗಳಿಂದ ಕುಂಟುತ್ತಾ ಸಾಗುತ್ತಿದೆ. ಇದು ಮತ್ತೊಂದು ಪಂಪ್ವೆಲ್ ಆಗದಿರಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ‌. ಇಮ್ತಿಯಾಝ್ ಮಾತನಾಡಿ, ಸ್ಥಳೀಯ ಶಾಸಕರಿಗೆ ಕಾಮಗಾರಿ ನಡೆಸುವ ಆಸಕ್ತಿ ಇಲ್ಲ. ಸುರತ್ಕಲ್ ಟೋಲ್ ಬಂದ್ ಮಾಡಿ ನೂರು ದಿನಗಳು‌ ಕಳೆದರೂ ಕೂಡ ಅಲ್ಲಿ ಟೋಲ್ ಗೂಡುಗಳು ಅಸ್ಥಿಪಂಜರದ ರೀತಿ ಉಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಿಪಿಐಎಂ ಪಂಜಿಮೊಗರು ಮುಖಂಡರಾದ ಅನಿಲ್, ಪ್ರಮೀಳಾ, ಸೌಮ್ಯ, ಬಾವು, ಶೆರೀಫ್, ಬಶೀರ್, ಸಂತೋಷ್, ಕಸ್ತೂರಿ, ಫಾತಿಮಾ ಖಲೀಲ್ , ಡಿವೈಎಫ್ಐ ನ ಶ್ರೀನಾಥ್ ಕುಲಾಲ್, ಮಕ್ಸೂದ್ ಕಾನ, ದಲಿತ ಸಂಘಟನೆಯ ಕೃಷ್ಣ ತಣ್ಣೀರುಬಾವಿ ಸಾಮಾಜಿಕ ಮುಂದಾಳುಗಳಾದ ಕನಕದಾಸ್, ಹನೀಫ್ ಕೂಳೂರು ಮತ್ತಿತರರು ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು