1:12 AM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಕೂಳೂರು ನೂತನ ಸೇತುವೆ ಕಾಮಗಾರಿ 3 ವರ್ಷಗಳಿಂದ ನನೆಗುದಿಗೆ: ಸಿಪಿಎಂ ಪ್ರತಿಭಟನೆ

10/03/2023, 20:43

ಮಂಗಳೂರು(reporterkarnataka.com): ಕೂಳೂರು ನದಿ ಸೇತುವೆ ಕಾಮಗಾರಿ ಪ್ರಾರಂಭವಾಗಿ ಮೂರು ವರ್ಷ ಕಳೆದಿದೆ. ಹಳೆ ಸೇತುವೆ ಅಸಮರ್ಥ ಎಂದು ಹೆದ್ದಾರಿ ಪ್ರಾಧಿಕಾರದ ತಜ್ಞರು ವರದಿ ನೀಡಿ ನಾಲ್ಕು ವರ್ಷ ದಾಟಿದೆ. ಮಳೆಗಾಲ ಸಮೀಪಿಸುತ್ತಿದ್ದು ನದಿ ಸೇತುವೆ ಕಾಮಗಾರಿಗೆ ಹಾಕಿರುವ ಭಾರೀ ಮಣ್ಣಿನ ಪ್ರಮಾಣದಿಂದ ಕೂಳೂರು ನದಿ ಪಾತ್ರದ ಪ್ರದೇಶಕ್ಕೆ ಮಳೆ ನೀರು ನಗ್ಗುವ ಅಪಾಯ ಒಂದೆಡೆಯಾದರೆ, ಹಳೆ ಸೇತುವೆ ಕುಸಿಯುವ ಭೀತಿ ಇನ್ನೊಂದೆಡೆ. ಆದುದರಿಂದ ಕಾಮಗಾರಿಯನ್ನು ಶೀಘ್ರವಾಗಿ ನಡೆಸಬೇಕು ಎಂದು ಒತ್ತಾಯಿಸಿ ಇಂದು ಸಿಪಿಎಂ ಪಂಜಿಮೊಗರು ವಲಯ ಸಮಿತಿ‌ ಕೂಳೂರು ಸೇತುವೆ ಬಳಿ ಪ್ರತಿಭಟನೆ ನಡೆಸಿತು.


ಪ್ರತಿಭಟನೆ ಉದ್ದೇಶಿಸಿ ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ, ಕೂಳೂರು ಸೇತುವೆ ಕಾಮಗಾರಿ ಮೂರು ವರ್ಷಗಳಿಂದ ಕುಂಟುತ್ತಾ ಸಾಗುತ್ತಿದೆ. ಇದು ಮತ್ತೊಂದು ಪಂಪ್ವೆಲ್ ಆಗದಿರಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ‌. ಇಮ್ತಿಯಾಝ್ ಮಾತನಾಡಿ, ಸ್ಥಳೀಯ ಶಾಸಕರಿಗೆ ಕಾಮಗಾರಿ ನಡೆಸುವ ಆಸಕ್ತಿ ಇಲ್ಲ. ಸುರತ್ಕಲ್ ಟೋಲ್ ಬಂದ್ ಮಾಡಿ ನೂರು ದಿನಗಳು‌ ಕಳೆದರೂ ಕೂಡ ಅಲ್ಲಿ ಟೋಲ್ ಗೂಡುಗಳು ಅಸ್ಥಿಪಂಜರದ ರೀತಿ ಉಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಿಪಿಐಎಂ ಪಂಜಿಮೊಗರು ಮುಖಂಡರಾದ ಅನಿಲ್, ಪ್ರಮೀಳಾ, ಸೌಮ್ಯ, ಬಾವು, ಶೆರೀಫ್, ಬಶೀರ್, ಸಂತೋಷ್, ಕಸ್ತೂರಿ, ಫಾತಿಮಾ ಖಲೀಲ್ , ಡಿವೈಎಫ್ಐ ನ ಶ್ರೀನಾಥ್ ಕುಲಾಲ್, ಮಕ್ಸೂದ್ ಕಾನ, ದಲಿತ ಸಂಘಟನೆಯ ಕೃಷ್ಣ ತಣ್ಣೀರುಬಾವಿ ಸಾಮಾಜಿಕ ಮುಂದಾಳುಗಳಾದ ಕನಕದಾಸ್, ಹನೀಫ್ ಕೂಳೂರು ಮತ್ತಿತರರು ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು