9:22 PM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಕೂಳೂರು ನೂತನ ಸೇತುವೆ ಕಾಮಗಾರಿ 3 ವರ್ಷಗಳಿಂದ ನನೆಗುದಿಗೆ: ಸಿಪಿಎಂ ಪ್ರತಿಭಟನೆ

10/03/2023, 20:43

ಮಂಗಳೂರು(reporterkarnataka.com): ಕೂಳೂರು ನದಿ ಸೇತುವೆ ಕಾಮಗಾರಿ ಪ್ರಾರಂಭವಾಗಿ ಮೂರು ವರ್ಷ ಕಳೆದಿದೆ. ಹಳೆ ಸೇತುವೆ ಅಸಮರ್ಥ ಎಂದು ಹೆದ್ದಾರಿ ಪ್ರಾಧಿಕಾರದ ತಜ್ಞರು ವರದಿ ನೀಡಿ ನಾಲ್ಕು ವರ್ಷ ದಾಟಿದೆ. ಮಳೆಗಾಲ ಸಮೀಪಿಸುತ್ತಿದ್ದು ನದಿ ಸೇತುವೆ ಕಾಮಗಾರಿಗೆ ಹಾಕಿರುವ ಭಾರೀ ಮಣ್ಣಿನ ಪ್ರಮಾಣದಿಂದ ಕೂಳೂರು ನದಿ ಪಾತ್ರದ ಪ್ರದೇಶಕ್ಕೆ ಮಳೆ ನೀರು ನಗ್ಗುವ ಅಪಾಯ ಒಂದೆಡೆಯಾದರೆ, ಹಳೆ ಸೇತುವೆ ಕುಸಿಯುವ ಭೀತಿ ಇನ್ನೊಂದೆಡೆ. ಆದುದರಿಂದ ಕಾಮಗಾರಿಯನ್ನು ಶೀಘ್ರವಾಗಿ ನಡೆಸಬೇಕು ಎಂದು ಒತ್ತಾಯಿಸಿ ಇಂದು ಸಿಪಿಎಂ ಪಂಜಿಮೊಗರು ವಲಯ ಸಮಿತಿ‌ ಕೂಳೂರು ಸೇತುವೆ ಬಳಿ ಪ್ರತಿಭಟನೆ ನಡೆಸಿತು.


ಪ್ರತಿಭಟನೆ ಉದ್ದೇಶಿಸಿ ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ, ಕೂಳೂರು ಸೇತುವೆ ಕಾಮಗಾರಿ ಮೂರು ವರ್ಷಗಳಿಂದ ಕುಂಟುತ್ತಾ ಸಾಗುತ್ತಿದೆ. ಇದು ಮತ್ತೊಂದು ಪಂಪ್ವೆಲ್ ಆಗದಿರಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ‌. ಇಮ್ತಿಯಾಝ್ ಮಾತನಾಡಿ, ಸ್ಥಳೀಯ ಶಾಸಕರಿಗೆ ಕಾಮಗಾರಿ ನಡೆಸುವ ಆಸಕ್ತಿ ಇಲ್ಲ. ಸುರತ್ಕಲ್ ಟೋಲ್ ಬಂದ್ ಮಾಡಿ ನೂರು ದಿನಗಳು‌ ಕಳೆದರೂ ಕೂಡ ಅಲ್ಲಿ ಟೋಲ್ ಗೂಡುಗಳು ಅಸ್ಥಿಪಂಜರದ ರೀತಿ ಉಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಿಪಿಐಎಂ ಪಂಜಿಮೊಗರು ಮುಖಂಡರಾದ ಅನಿಲ್, ಪ್ರಮೀಳಾ, ಸೌಮ್ಯ, ಬಾವು, ಶೆರೀಫ್, ಬಶೀರ್, ಸಂತೋಷ್, ಕಸ್ತೂರಿ, ಫಾತಿಮಾ ಖಲೀಲ್ , ಡಿವೈಎಫ್ಐ ನ ಶ್ರೀನಾಥ್ ಕುಲಾಲ್, ಮಕ್ಸೂದ್ ಕಾನ, ದಲಿತ ಸಂಘಟನೆಯ ಕೃಷ್ಣ ತಣ್ಣೀರುಬಾವಿ ಸಾಮಾಜಿಕ ಮುಂದಾಳುಗಳಾದ ಕನಕದಾಸ್, ಹನೀಫ್ ಕೂಳೂರು ಮತ್ತಿತರರು ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು