7:21 PM Monday3 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಕೂಳೂರು ನೂತನ ಸೇತುವೆ ಕಾಮಗಾರಿ 3 ವರ್ಷಗಳಿಂದ ನನೆಗುದಿಗೆ: ಸಿಪಿಎಂ ಪ್ರತಿಭಟನೆ

10/03/2023, 20:43

ಮಂಗಳೂರು(reporterkarnataka.com): ಕೂಳೂರು ನದಿ ಸೇತುವೆ ಕಾಮಗಾರಿ ಪ್ರಾರಂಭವಾಗಿ ಮೂರು ವರ್ಷ ಕಳೆದಿದೆ. ಹಳೆ ಸೇತುವೆ ಅಸಮರ್ಥ ಎಂದು ಹೆದ್ದಾರಿ ಪ್ರಾಧಿಕಾರದ ತಜ್ಞರು ವರದಿ ನೀಡಿ ನಾಲ್ಕು ವರ್ಷ ದಾಟಿದೆ. ಮಳೆಗಾಲ ಸಮೀಪಿಸುತ್ತಿದ್ದು ನದಿ ಸೇತುವೆ ಕಾಮಗಾರಿಗೆ ಹಾಕಿರುವ ಭಾರೀ ಮಣ್ಣಿನ ಪ್ರಮಾಣದಿಂದ ಕೂಳೂರು ನದಿ ಪಾತ್ರದ ಪ್ರದೇಶಕ್ಕೆ ಮಳೆ ನೀರು ನಗ್ಗುವ ಅಪಾಯ ಒಂದೆಡೆಯಾದರೆ, ಹಳೆ ಸೇತುವೆ ಕುಸಿಯುವ ಭೀತಿ ಇನ್ನೊಂದೆಡೆ. ಆದುದರಿಂದ ಕಾಮಗಾರಿಯನ್ನು ಶೀಘ್ರವಾಗಿ ನಡೆಸಬೇಕು ಎಂದು ಒತ್ತಾಯಿಸಿ ಇಂದು ಸಿಪಿಎಂ ಪಂಜಿಮೊಗರು ವಲಯ ಸಮಿತಿ‌ ಕೂಳೂರು ಸೇತುವೆ ಬಳಿ ಪ್ರತಿಭಟನೆ ನಡೆಸಿತು.


ಪ್ರತಿಭಟನೆ ಉದ್ದೇಶಿಸಿ ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ, ಕೂಳೂರು ಸೇತುವೆ ಕಾಮಗಾರಿ ಮೂರು ವರ್ಷಗಳಿಂದ ಕುಂಟುತ್ತಾ ಸಾಗುತ್ತಿದೆ. ಇದು ಮತ್ತೊಂದು ಪಂಪ್ವೆಲ್ ಆಗದಿರಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ‌. ಇಮ್ತಿಯಾಝ್ ಮಾತನಾಡಿ, ಸ್ಥಳೀಯ ಶಾಸಕರಿಗೆ ಕಾಮಗಾರಿ ನಡೆಸುವ ಆಸಕ್ತಿ ಇಲ್ಲ. ಸುರತ್ಕಲ್ ಟೋಲ್ ಬಂದ್ ಮಾಡಿ ನೂರು ದಿನಗಳು‌ ಕಳೆದರೂ ಕೂಡ ಅಲ್ಲಿ ಟೋಲ್ ಗೂಡುಗಳು ಅಸ್ಥಿಪಂಜರದ ರೀತಿ ಉಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಿಪಿಐಎಂ ಪಂಜಿಮೊಗರು ಮುಖಂಡರಾದ ಅನಿಲ್, ಪ್ರಮೀಳಾ, ಸೌಮ್ಯ, ಬಾವು, ಶೆರೀಫ್, ಬಶೀರ್, ಸಂತೋಷ್, ಕಸ್ತೂರಿ, ಫಾತಿಮಾ ಖಲೀಲ್ , ಡಿವೈಎಫ್ಐ ನ ಶ್ರೀನಾಥ್ ಕುಲಾಲ್, ಮಕ್ಸೂದ್ ಕಾನ, ದಲಿತ ಸಂಘಟನೆಯ ಕೃಷ್ಣ ತಣ್ಣೀರುಬಾವಿ ಸಾಮಾಜಿಕ ಮುಂದಾಳುಗಳಾದ ಕನಕದಾಸ್, ಹನೀಫ್ ಕೂಳೂರು ಮತ್ತಿತರರು ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು