1:34 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಕೂಳೂರು ನೂತನ ಸೇತುವೆ ಕಾಮಗಾರಿ 3 ವರ್ಷಗಳಿಂದ ನನೆಗುದಿಗೆ: ಸಿಪಿಎಂ ಪ್ರತಿಭಟನೆ

10/03/2023, 20:43

ಮಂಗಳೂರು(reporterkarnataka.com): ಕೂಳೂರು ನದಿ ಸೇತುವೆ ಕಾಮಗಾರಿ ಪ್ರಾರಂಭವಾಗಿ ಮೂರು ವರ್ಷ ಕಳೆದಿದೆ. ಹಳೆ ಸೇತುವೆ ಅಸಮರ್ಥ ಎಂದು ಹೆದ್ದಾರಿ ಪ್ರಾಧಿಕಾರದ ತಜ್ಞರು ವರದಿ ನೀಡಿ ನಾಲ್ಕು ವರ್ಷ ದಾಟಿದೆ. ಮಳೆಗಾಲ ಸಮೀಪಿಸುತ್ತಿದ್ದು ನದಿ ಸೇತುವೆ ಕಾಮಗಾರಿಗೆ ಹಾಕಿರುವ ಭಾರೀ ಮಣ್ಣಿನ ಪ್ರಮಾಣದಿಂದ ಕೂಳೂರು ನದಿ ಪಾತ್ರದ ಪ್ರದೇಶಕ್ಕೆ ಮಳೆ ನೀರು ನಗ್ಗುವ ಅಪಾಯ ಒಂದೆಡೆಯಾದರೆ, ಹಳೆ ಸೇತುವೆ ಕುಸಿಯುವ ಭೀತಿ ಇನ್ನೊಂದೆಡೆ. ಆದುದರಿಂದ ಕಾಮಗಾರಿಯನ್ನು ಶೀಘ್ರವಾಗಿ ನಡೆಸಬೇಕು ಎಂದು ಒತ್ತಾಯಿಸಿ ಇಂದು ಸಿಪಿಎಂ ಪಂಜಿಮೊಗರು ವಲಯ ಸಮಿತಿ‌ ಕೂಳೂರು ಸೇತುವೆ ಬಳಿ ಪ್ರತಿಭಟನೆ ನಡೆಸಿತು.


ಪ್ರತಿಭಟನೆ ಉದ್ದೇಶಿಸಿ ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ, ಕೂಳೂರು ಸೇತುವೆ ಕಾಮಗಾರಿ ಮೂರು ವರ್ಷಗಳಿಂದ ಕುಂಟುತ್ತಾ ಸಾಗುತ್ತಿದೆ. ಇದು ಮತ್ತೊಂದು ಪಂಪ್ವೆಲ್ ಆಗದಿರಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ‌. ಇಮ್ತಿಯಾಝ್ ಮಾತನಾಡಿ, ಸ್ಥಳೀಯ ಶಾಸಕರಿಗೆ ಕಾಮಗಾರಿ ನಡೆಸುವ ಆಸಕ್ತಿ ಇಲ್ಲ. ಸುರತ್ಕಲ್ ಟೋಲ್ ಬಂದ್ ಮಾಡಿ ನೂರು ದಿನಗಳು‌ ಕಳೆದರೂ ಕೂಡ ಅಲ್ಲಿ ಟೋಲ್ ಗೂಡುಗಳು ಅಸ್ಥಿಪಂಜರದ ರೀತಿ ಉಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಿಪಿಐಎಂ ಪಂಜಿಮೊಗರು ಮುಖಂಡರಾದ ಅನಿಲ್, ಪ್ರಮೀಳಾ, ಸೌಮ್ಯ, ಬಾವು, ಶೆರೀಫ್, ಬಶೀರ್, ಸಂತೋಷ್, ಕಸ್ತೂರಿ, ಫಾತಿಮಾ ಖಲೀಲ್ , ಡಿವೈಎಫ್ಐ ನ ಶ್ರೀನಾಥ್ ಕುಲಾಲ್, ಮಕ್ಸೂದ್ ಕಾನ, ದಲಿತ ಸಂಘಟನೆಯ ಕೃಷ್ಣ ತಣ್ಣೀರುಬಾವಿ ಸಾಮಾಜಿಕ ಮುಂದಾಳುಗಳಾದ ಕನಕದಾಸ್, ಹನೀಫ್ ಕೂಳೂರು ಮತ್ತಿತರರು ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು