10:30 AM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಕೂಳೂರು ನೂತನ ಸೇತುವೆ ಕಾಮಗಾರಿ 3 ವರ್ಷಗಳಿಂದ ನನೆಗುದಿಗೆ: ಸಿಪಿಎಂ ಪ್ರತಿಭಟನೆ

10/03/2023, 20:43

ಮಂಗಳೂರು(reporterkarnataka.com): ಕೂಳೂರು ನದಿ ಸೇತುವೆ ಕಾಮಗಾರಿ ಪ್ರಾರಂಭವಾಗಿ ಮೂರು ವರ್ಷ ಕಳೆದಿದೆ. ಹಳೆ ಸೇತುವೆ ಅಸಮರ್ಥ ಎಂದು ಹೆದ್ದಾರಿ ಪ್ರಾಧಿಕಾರದ ತಜ್ಞರು ವರದಿ ನೀಡಿ ನಾಲ್ಕು ವರ್ಷ ದಾಟಿದೆ. ಮಳೆಗಾಲ ಸಮೀಪಿಸುತ್ತಿದ್ದು ನದಿ ಸೇತುವೆ ಕಾಮಗಾರಿಗೆ ಹಾಕಿರುವ ಭಾರೀ ಮಣ್ಣಿನ ಪ್ರಮಾಣದಿಂದ ಕೂಳೂರು ನದಿ ಪಾತ್ರದ ಪ್ರದೇಶಕ್ಕೆ ಮಳೆ ನೀರು ನಗ್ಗುವ ಅಪಾಯ ಒಂದೆಡೆಯಾದರೆ, ಹಳೆ ಸೇತುವೆ ಕುಸಿಯುವ ಭೀತಿ ಇನ್ನೊಂದೆಡೆ. ಆದುದರಿಂದ ಕಾಮಗಾರಿಯನ್ನು ಶೀಘ್ರವಾಗಿ ನಡೆಸಬೇಕು ಎಂದು ಒತ್ತಾಯಿಸಿ ಇಂದು ಸಿಪಿಎಂ ಪಂಜಿಮೊಗರು ವಲಯ ಸಮಿತಿ‌ ಕೂಳೂರು ಸೇತುವೆ ಬಳಿ ಪ್ರತಿಭಟನೆ ನಡೆಸಿತು.


ಪ್ರತಿಭಟನೆ ಉದ್ದೇಶಿಸಿ ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ, ಕೂಳೂರು ಸೇತುವೆ ಕಾಮಗಾರಿ ಮೂರು ವರ್ಷಗಳಿಂದ ಕುಂಟುತ್ತಾ ಸಾಗುತ್ತಿದೆ. ಇದು ಮತ್ತೊಂದು ಪಂಪ್ವೆಲ್ ಆಗದಿರಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ‌. ಇಮ್ತಿಯಾಝ್ ಮಾತನಾಡಿ, ಸ್ಥಳೀಯ ಶಾಸಕರಿಗೆ ಕಾಮಗಾರಿ ನಡೆಸುವ ಆಸಕ್ತಿ ಇಲ್ಲ. ಸುರತ್ಕಲ್ ಟೋಲ್ ಬಂದ್ ಮಾಡಿ ನೂರು ದಿನಗಳು‌ ಕಳೆದರೂ ಕೂಡ ಅಲ್ಲಿ ಟೋಲ್ ಗೂಡುಗಳು ಅಸ್ಥಿಪಂಜರದ ರೀತಿ ಉಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಿಪಿಐಎಂ ಪಂಜಿಮೊಗರು ಮುಖಂಡರಾದ ಅನಿಲ್, ಪ್ರಮೀಳಾ, ಸೌಮ್ಯ, ಬಾವು, ಶೆರೀಫ್, ಬಶೀರ್, ಸಂತೋಷ್, ಕಸ್ತೂರಿ, ಫಾತಿಮಾ ಖಲೀಲ್ , ಡಿವೈಎಫ್ಐ ನ ಶ್ರೀನಾಥ್ ಕುಲಾಲ್, ಮಕ್ಸೂದ್ ಕಾನ, ದಲಿತ ಸಂಘಟನೆಯ ಕೃಷ್ಣ ತಣ್ಣೀರುಬಾವಿ ಸಾಮಾಜಿಕ ಮುಂದಾಳುಗಳಾದ ಕನಕದಾಸ್, ಹನೀಫ್ ಕೂಳೂರು ಮತ್ತಿತರರು ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು