4:10 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಲಾಕ್ ಡೌನ್: ರಾಜ್ಯದಲ್ಲಿ ಜುಲೈ 5ರಿಂದ ಮತ್ತಷ್ಟು ಸಡಿಲಿಕೆ; ಶಾಲಾ-ಕಾಲೇಜು ಇಲ್ಲ, ಮಾಲ್, ಬಾರ್, ಸ್ಮಿಮ್ಮಿಂಗ್ ಪೂಲ್ ತೆರೆಯಲು ಅವಕಾಶ

03/07/2021, 20:01

ಬೆಂಗಳೂರು(reporterkarnataka news): ರಾಜ್ಯದಲ್ಲಿ ಲಾಕ್ ಡೌನ್ ಜುಲೈ 5ರಿಂದ ಮತ್ತಷ್ಟು ಸಡಿಲಿಕೆ ಮಾಡಲಾಗಿದ್ದು, ಜುಲೈ 19ರ ಬೆಳಗ್ಗೆ 5 ಗಂಟೆ ವರೆಗೆ ಜಾರಿಯಲ್ಲಿರುತ್ತದೆ.

ವಾರಾಂತ್ಯದ ಕರ್ಫ್ಯೂ ತೆಗೆಯಲಾಗಿದೆ. ರಾತ್ರಿ ಕರ್ಫ್ಯೂ ರಾತ್ರಿ 9ರಿಂದ ಬೆಳಗ್ಗೆ 5ರ ತನಕ ಜಾರಿಯಲ್ಲಿರುತ್ತದೆ. ಸರಕಾರಿ, ಖಾಸಗಿ ಕಚೇರಿ, ಕಾರ್ಖಾನೆಗಳನ್ನು ಶೇ.100 ಹಾಜರಾತಿಯೊಂದಿಗೆ ತೆರೆಯಲು ಅವಕಾಶ ನೀಡಲಾಗಿದೆ. ಸರಕಾರಿ ಮತ್ತು ಖಾಸಗಿ ಬಸ್ ಗಳಿಗೆ ಶೇ.100 ಪ್ರಯಾಣಿಕರೊಂದಿಗೆ ಸಂಚರಿಸಲು ಅನುವು ಮಾಡಿಕೊಡಲಾಗಿದೆ. ಮಾಲ್, ಬಾರ್ ತೆರೆಯಲು ಗ್ರೀನ್ ಸಿಗ್ನಲ್ ದೊರೆತಿದೆ. ಶಾಲಾ-ಕಾಲೇಜು, ಪಬ್, ಥಿಯೇಟರ್  ಗಳಿಗೆ ಅವಕಾಶ ನೀಡಿಲ್ಲ. ಈಜುಕೊಳದಲ್ಲಿ ತರಬೇತಿ ಪಡೆಯುವವರಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಇವೆಲ್ಲ ಆಯಾ ಜಿಲ್ಲೆಗಳ ಪರಿಸ್ಥಿತಿಯ ಆಧಾರದಲ್ಲಿ ತೆರೆದುಕೊಳ್ಳಲಿದೆ. ಜಿಲ್ಕಾಡಳಿತಕ್ಕೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಮಾಧ್ಯಮ ಜತೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು