10:26 AM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಲಾಕ್ ಡೌನ್: ರಾಜ್ಯದಲ್ಲಿ ಜುಲೈ 5ರಿಂದ ಮತ್ತಷ್ಟು ಸಡಿಲಿಕೆ; ಶಾಲಾ-ಕಾಲೇಜು ಇಲ್ಲ, ಮಾಲ್, ಬಾರ್, ಸ್ಮಿಮ್ಮಿಂಗ್ ಪೂಲ್ ತೆರೆಯಲು ಅವಕಾಶ

03/07/2021, 20:01

ಬೆಂಗಳೂರು(reporterkarnataka news): ರಾಜ್ಯದಲ್ಲಿ ಲಾಕ್ ಡೌನ್ ಜುಲೈ 5ರಿಂದ ಮತ್ತಷ್ಟು ಸಡಿಲಿಕೆ ಮಾಡಲಾಗಿದ್ದು, ಜುಲೈ 19ರ ಬೆಳಗ್ಗೆ 5 ಗಂಟೆ ವರೆಗೆ ಜಾರಿಯಲ್ಲಿರುತ್ತದೆ.

ವಾರಾಂತ್ಯದ ಕರ್ಫ್ಯೂ ತೆಗೆಯಲಾಗಿದೆ. ರಾತ್ರಿ ಕರ್ಫ್ಯೂ ರಾತ್ರಿ 9ರಿಂದ ಬೆಳಗ್ಗೆ 5ರ ತನಕ ಜಾರಿಯಲ್ಲಿರುತ್ತದೆ. ಸರಕಾರಿ, ಖಾಸಗಿ ಕಚೇರಿ, ಕಾರ್ಖಾನೆಗಳನ್ನು ಶೇ.100 ಹಾಜರಾತಿಯೊಂದಿಗೆ ತೆರೆಯಲು ಅವಕಾಶ ನೀಡಲಾಗಿದೆ. ಸರಕಾರಿ ಮತ್ತು ಖಾಸಗಿ ಬಸ್ ಗಳಿಗೆ ಶೇ.100 ಪ್ರಯಾಣಿಕರೊಂದಿಗೆ ಸಂಚರಿಸಲು ಅನುವು ಮಾಡಿಕೊಡಲಾಗಿದೆ. ಮಾಲ್, ಬಾರ್ ತೆರೆಯಲು ಗ್ರೀನ್ ಸಿಗ್ನಲ್ ದೊರೆತಿದೆ. ಶಾಲಾ-ಕಾಲೇಜು, ಪಬ್, ಥಿಯೇಟರ್  ಗಳಿಗೆ ಅವಕಾಶ ನೀಡಿಲ್ಲ. ಈಜುಕೊಳದಲ್ಲಿ ತರಬೇತಿ ಪಡೆಯುವವರಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಇವೆಲ್ಲ ಆಯಾ ಜಿಲ್ಲೆಗಳ ಪರಿಸ್ಥಿತಿಯ ಆಧಾರದಲ್ಲಿ ತೆರೆದುಕೊಳ್ಳಲಿದೆ. ಜಿಲ್ಕಾಡಳಿತಕ್ಕೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಮಾಧ್ಯಮ ಜತೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು