1:25 PM Friday17 - July 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ

ಇತ್ತೀಚಿನ ಸುದ್ದಿ

ಮಾಜಿ ಶಾಸಕ ಬಾವಾ ವಿರುದ್ಧ 3 ಕೋಟಿ ಮಾನನಷ್ಟ ಮೊಕದ್ದಮೆ ಹೂಡುವೆ: ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ

24/12/2022, 22:28

ಸುರತ್ಕಲ್(reporterkarnataka.com): ಸುರತ್ಕಲ್ ಮಾರುಕಟ್ಟೆ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಮೊಯ್ದೀನ್ ಬಾವಾ ಅವರು ತನ್ನ ವಿರುದ್ಧ 38 ಕೋಟಿ ರೂ. ಕಮಿಷನ್ ಪಡೆದ ಆರೋಪ ಮಾಡಿದ್ದಾರೆ. ಮಾಜಿ ಶಾಸಕರು ಆ ಕುರಿತು ಸರಿಯಾದ ದಾಖಲೆ ಕೊಡಲಿ. ಇಲ್ಲದಿದ್ದರೆ ಅವರ ವಿರುದ್ಧ 3 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಶಾಸಕ ಡಾ. ವೈ. ಭರತ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಇಲ್ಲಿ ಮಾಧ್ಯಮ ಜತೆ ಮಾತನಾಡಿದ ಶಾಸಕರು, ಮಾಜಿ ಶಾಸಕರಿಗೆ ತಾನು ಲಾಯರ್ ನೋಟಿಸ್ ಕಳುಹಿಸುತ್ತೇನೆ. ಅವರು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಲಿ. ಇಲ್ಲದಿದ್ದರೆ ಅವರ ವಿರುದ್ಧ 3 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದರು.
ಸದನದಲ್ಲಿ ತಾನು ಪ್ರಶ್ನೆ ಕೇಳಿದಾಗ ಸಚಿವರು ಉತ್ತರ ನೀಡಿದ್ದಾರೆ. ಆ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಉಪ ನಾಯಕ ಯು.ಟಿ. ಖಾದರ್ ಹಾಜರಿದ್ದರು. ಸದನದಲ್ಲಿ ಸುಳ್ಳು ಹೇಳಲು ಸಾಧ್ಯವಿಲ್ಲ. ಸಚಿವರು ಎಲ್ಲವನ್ನು ಪರಿಶೀಲಿಸಿ ಉತ್ತರ ನೀಡಿದ್ದಾರೆ ಎಂದು ಡಾ. ಭರತ್ ಶೆಟ್ಟಿ ನುಡಿದರು.

ಸುರತ್ಕಲ್ ಮಾರುಕಟ್ಟೆಗೆ ಸಂಬಂಧಿಸಿದ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸದೆ ವಿಳಂಬವಾಗಿದೆ. ಜಿಎಸ್ ಟಿ ಸೇರಿಸಿಲ್ಲ. ಎಸ್ ಆರ್ ರೇಟ್ ಜಾಸ್ತಿಯಾಗಿದೆ. ಅದನ್ನು ಸರಿಪಡಿಸಲು ಗುತ್ತಿಗೆದಾರರು ಒತ್ತಾಯಿಸಿದ್ದಾರೆ. ಇದನ್ನೆಲ್ಲ ಸೇರಿಸಿ ಹೊಸ ಟೆಂಡರ್ ಕರೆಯಬೇಕು. ಗುತ್ತಿಗೆದಾರರ ಹಳೆ ಬಿಲ್ ನ್ನು ಸರಕಾರ ಪಾವತಿಸಿದೆ ಎಂದು ಶಾಸಕರು ವಿವರಿಸಿದರರು.
ಮಂಗಳೂರು ಉತ್ತರ ಕ್ಷೇತ್ರ ಈಗ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ರಸ್ತೆ, ತಡೆಗೋಡೆ ಸೇರಿದಂತೆ ಎಲ್ಲ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಇದನ್ನು ಸಹಿಸಲಾಗದೆ ರಾಜಕೀಯ ಮಾಡುತ್ತಿದ್ದಾರೆ. ಮಾಜಿ ಶಾಸಕ ಬಾವಾ ಅವರು ಮಾತನಾಡುವ ಭರದಲ್ಲಿ ಏನೋ ಹೇಳಿದ್ದಾರೆ ಎಂದು ಸುಮ್ಮನಿರಲು ಸಾಧ್ಯವಿಲ್ಲ ಎಂದು ಶಾಸಕರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು