10:38 AM Friday5 - June 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆಶಿ: ಎಲ್ಲ ಇಲಾಖೆಗಳ ಕಾರ್ಯದರ್ಶಿಗಳ ಸಭೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ರಾಜೇಂದ್ರ ಚೋಳನ್ ನೇಮಕ ಕೊಡಗು ಜಿಲ್ಲೆಯಲ್ಲಿ ಜುಲೈ 30ರವರೆಗೆ ಮೀನುಗಾರಿಕೆ ನಿಷೇಧ ಯು.ಟಿ. ಖಾದರ್: ಸ್ಪೀಕರ್ ಸ್ಥಾನದಿಂದ ಮತ್ತೆ ಸಕ್ರೀಯ ರಾಜಕೀಯಕ್ಕೆ; ಡಿಕೆಶಿ ಸಂಪುಟದಲ್ಲಿ ಸಚಿವ… ಡಿ.ಕೆ. ಶಿವಕುಮಾರ್ ರಾಜ್ಯಭಾರ ಶುರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ

ಇತ್ತೀಚಿನ ಸುದ್ದಿ

ಮಾಜಿ ಶಾಸಕ ಬಾವಾ ವಿರುದ್ಧ 3 ಕೋಟಿ ಮಾನನಷ್ಟ ಮೊಕದ್ದಮೆ ಹೂಡುವೆ: ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ

24/12/2022, 22:28

ಸುರತ್ಕಲ್(reporterkarnataka.com): ಸುರತ್ಕಲ್ ಮಾರುಕಟ್ಟೆ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಮೊಯ್ದೀನ್ ಬಾವಾ ಅವರು ತನ್ನ ವಿರುದ್ಧ 38 ಕೋಟಿ ರೂ. ಕಮಿಷನ್ ಪಡೆದ ಆರೋಪ ಮಾಡಿದ್ದಾರೆ. ಮಾಜಿ ಶಾಸಕರು ಆ ಕುರಿತು ಸರಿಯಾದ ದಾಖಲೆ ಕೊಡಲಿ. ಇಲ್ಲದಿದ್ದರೆ ಅವರ ವಿರುದ್ಧ 3 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಶಾಸಕ ಡಾ. ವೈ. ಭರತ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಇಲ್ಲಿ ಮಾಧ್ಯಮ ಜತೆ ಮಾತನಾಡಿದ ಶಾಸಕರು, ಮಾಜಿ ಶಾಸಕರಿಗೆ ತಾನು ಲಾಯರ್ ನೋಟಿಸ್ ಕಳುಹಿಸುತ್ತೇನೆ. ಅವರು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಲಿ. ಇಲ್ಲದಿದ್ದರೆ ಅವರ ವಿರುದ್ಧ 3 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದರು.
ಸದನದಲ್ಲಿ ತಾನು ಪ್ರಶ್ನೆ ಕೇಳಿದಾಗ ಸಚಿವರು ಉತ್ತರ ನೀಡಿದ್ದಾರೆ. ಆ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಉಪ ನಾಯಕ ಯು.ಟಿ. ಖಾದರ್ ಹಾಜರಿದ್ದರು. ಸದನದಲ್ಲಿ ಸುಳ್ಳು ಹೇಳಲು ಸಾಧ್ಯವಿಲ್ಲ. ಸಚಿವರು ಎಲ್ಲವನ್ನು ಪರಿಶೀಲಿಸಿ ಉತ್ತರ ನೀಡಿದ್ದಾರೆ ಎಂದು ಡಾ. ಭರತ್ ಶೆಟ್ಟಿ ನುಡಿದರು.

ಸುರತ್ಕಲ್ ಮಾರುಕಟ್ಟೆಗೆ ಸಂಬಂಧಿಸಿದ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸದೆ ವಿಳಂಬವಾಗಿದೆ. ಜಿಎಸ್ ಟಿ ಸೇರಿಸಿಲ್ಲ. ಎಸ್ ಆರ್ ರೇಟ್ ಜಾಸ್ತಿಯಾಗಿದೆ. ಅದನ್ನು ಸರಿಪಡಿಸಲು ಗುತ್ತಿಗೆದಾರರು ಒತ್ತಾಯಿಸಿದ್ದಾರೆ. ಇದನ್ನೆಲ್ಲ ಸೇರಿಸಿ ಹೊಸ ಟೆಂಡರ್ ಕರೆಯಬೇಕು. ಗುತ್ತಿಗೆದಾರರ ಹಳೆ ಬಿಲ್ ನ್ನು ಸರಕಾರ ಪಾವತಿಸಿದೆ ಎಂದು ಶಾಸಕರು ವಿವರಿಸಿದರರು.
ಮಂಗಳೂರು ಉತ್ತರ ಕ್ಷೇತ್ರ ಈಗ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ರಸ್ತೆ, ತಡೆಗೋಡೆ ಸೇರಿದಂತೆ ಎಲ್ಲ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಇದನ್ನು ಸಹಿಸಲಾಗದೆ ರಾಜಕೀಯ ಮಾಡುತ್ತಿದ್ದಾರೆ. ಮಾಜಿ ಶಾಸಕ ಬಾವಾ ಅವರು ಮಾತನಾಡುವ ಭರದಲ್ಲಿ ಏನೋ ಹೇಳಿದ್ದಾರೆ ಎಂದು ಸುಮ್ಮನಿರಲು ಸಾಧ್ಯವಿಲ್ಲ ಎಂದು ಶಾಸಕರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು