1:54 PM Monday23 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ಮಾಜಿ ಶಾಸಕ ಬಾವಾ ವಿರುದ್ಧ 3 ಕೋಟಿ ಮಾನನಷ್ಟ ಮೊಕದ್ದಮೆ ಹೂಡುವೆ: ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ

24/12/2022, 22:28

ಸುರತ್ಕಲ್(reporterkarnataka.com): ಸುರತ್ಕಲ್ ಮಾರುಕಟ್ಟೆ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಮೊಯ್ದೀನ್ ಬಾವಾ ಅವರು ತನ್ನ ವಿರುದ್ಧ 38 ಕೋಟಿ ರೂ. ಕಮಿಷನ್ ಪಡೆದ ಆರೋಪ ಮಾಡಿದ್ದಾರೆ. ಮಾಜಿ ಶಾಸಕರು ಆ ಕುರಿತು ಸರಿಯಾದ ದಾಖಲೆ ಕೊಡಲಿ. ಇಲ್ಲದಿದ್ದರೆ ಅವರ ವಿರುದ್ಧ 3 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಶಾಸಕ ಡಾ. ವೈ. ಭರತ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಇಲ್ಲಿ ಮಾಧ್ಯಮ ಜತೆ ಮಾತನಾಡಿದ ಶಾಸಕರು, ಮಾಜಿ ಶಾಸಕರಿಗೆ ತಾನು ಲಾಯರ್ ನೋಟಿಸ್ ಕಳುಹಿಸುತ್ತೇನೆ. ಅವರು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಲಿ. ಇಲ್ಲದಿದ್ದರೆ ಅವರ ವಿರುದ್ಧ 3 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದರು.
ಸದನದಲ್ಲಿ ತಾನು ಪ್ರಶ್ನೆ ಕೇಳಿದಾಗ ಸಚಿವರು ಉತ್ತರ ನೀಡಿದ್ದಾರೆ. ಆ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಉಪ ನಾಯಕ ಯು.ಟಿ. ಖಾದರ್ ಹಾಜರಿದ್ದರು. ಸದನದಲ್ಲಿ ಸುಳ್ಳು ಹೇಳಲು ಸಾಧ್ಯವಿಲ್ಲ. ಸಚಿವರು ಎಲ್ಲವನ್ನು ಪರಿಶೀಲಿಸಿ ಉತ್ತರ ನೀಡಿದ್ದಾರೆ ಎಂದು ಡಾ. ಭರತ್ ಶೆಟ್ಟಿ ನುಡಿದರು.

ಸುರತ್ಕಲ್ ಮಾರುಕಟ್ಟೆಗೆ ಸಂಬಂಧಿಸಿದ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸದೆ ವಿಳಂಬವಾಗಿದೆ. ಜಿಎಸ್ ಟಿ ಸೇರಿಸಿಲ್ಲ. ಎಸ್ ಆರ್ ರೇಟ್ ಜಾಸ್ತಿಯಾಗಿದೆ. ಅದನ್ನು ಸರಿಪಡಿಸಲು ಗುತ್ತಿಗೆದಾರರು ಒತ್ತಾಯಿಸಿದ್ದಾರೆ. ಇದನ್ನೆಲ್ಲ ಸೇರಿಸಿ ಹೊಸ ಟೆಂಡರ್ ಕರೆಯಬೇಕು. ಗುತ್ತಿಗೆದಾರರ ಹಳೆ ಬಿಲ್ ನ್ನು ಸರಕಾರ ಪಾವತಿಸಿದೆ ಎಂದು ಶಾಸಕರು ವಿವರಿಸಿದರರು.
ಮಂಗಳೂರು ಉತ್ತರ ಕ್ಷೇತ್ರ ಈಗ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ರಸ್ತೆ, ತಡೆಗೋಡೆ ಸೇರಿದಂತೆ ಎಲ್ಲ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಇದನ್ನು ಸಹಿಸಲಾಗದೆ ರಾಜಕೀಯ ಮಾಡುತ್ತಿದ್ದಾರೆ. ಮಾಜಿ ಶಾಸಕ ಬಾವಾ ಅವರು ಮಾತನಾಡುವ ಭರದಲ್ಲಿ ಏನೋ ಹೇಳಿದ್ದಾರೆ ಎಂದು ಸುಮ್ಮನಿರಲು ಸಾಧ್ಯವಿಲ್ಲ ಎಂದು ಶಾಸಕರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು