4:02 PM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಮಾದಕ ವ್ಯಸನ ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯ: ಕರಾವಳಿ ಪೊಲೀಸ್ ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್

03/12/2024, 14:39

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಮಾದಕ ವ್ಯಸನಿಯು ಅಪರಾಧಿಕ ಕೃತ್ಯಗಳಲ್ಲಿ ಭಾಗವಹಿಸಿ ಜೈಲು ಶಿಕ್ಷೆಯನ್ನು ಅನುಭವಿಸುತ್ತಾನೆ. ಇದನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತ್ಯವ್ಯ ಎಂದು ಕರಾವಳಿ ಪೊಲೀಸ್ ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಹೇಳಿದರು.
ಕೇಂದ್ರ ಸರ್ಕಾರದ ಯುವಜನ ಮತ್ತು ಕ್ರಿಡಾ ಇಲಾಖೆಯ ನೆಹರು ಯುವಕ ಕೇಂದ್ರದ ಆಶ್ರಯದಲ್ಲಿ ಜಪ್ಪಿನಮೊಗರು ದಕ್ಷಿಣ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಸಭಾಭವನದಲ್ಲಿ ಇತ್ತೀಜಿಗೆ ನಡೆದ ಮಾದಕವ್ಯಸನ ಮುಕ್ತ ಸಮಾಜ ನಿರ್ಮಾಣದ ಬಗ್ಗೆ ಜನಜಾಗೃತಿ ಹಾಗೂ ಮಾದಕ ವ್ಯಸನ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ತಾಲೂಕು ವೈದ್ಯಾಧಿಕಾರಿ ಡಾ.|ಸುಜಯ ಭಂಡಾರಿ ಅವರು ಮಾತನಾಡಿ, ಮಾದಕ ದ್ರವ್ಯಗಳ ವ್ಯಸನಿಯು ತನ್ನ ದೈಹಿಕ ಆರೋಗ್ಯ ಮತ್ತು ಮಾನಸಿಕ ಆರೋಗ್ಯವನ್ನು ಕಡಿಸುವುದರ ಜೊತೆಗೆ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತಾನೆ ಎಂದು ನುಡಿದರು.


ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ವೈದ್ಯಾಧಿಕಾರಿ ಡಾ. ಎಚ್. ಆರ್. ತಿಮ್ಮಯ್ಯ ವಹಿಸಿದ್ದರು. ನೆಹರು ಯುವಕ ಕೇಂದ್ರದ ಅಧಿಕಾರಿ ಜಗದೀಶ್ ಪ್ರಸ್ತಾವನೆ ಗೈದರು.


ಅತಿಥಿಗಳಾಗಿ ಸುಧಾಕರ್. ಜೆ, ದೀಪಕ್ ಸುವರ್ಣ, ಎಂ, ದಿವಾಕರ್, ಮುರಳಿ ಕೃಷ್ಣ, ಎ .ಜನಾರ್ಧನ್, ದಿನಕರ್ ಕುಲಾಲ್ ಮೊದಲಾದವರು ಭಾಗವಹಿಸಿದ್ದು, ಜಿ.ಎಂ, ಸ್ಪೋರ್ಟ್ಸ್ ಕ್ಲಬ್ ನ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿದರು. ಸಂಗಮ್ ಫ್ರೆಂಡ್ಸ್ ಕ್ಲಬ್ ನ ಮಾಜಿ ಅಧ್ಯಕ್ಷ ಶ್ರೀನಿವಾಸ್ ಕೆ. ವಂದಿಸಿದರು. ಕೃಷ್ಣ ಶ್ರೀಯಾನ್ ನಿರೂಪಿಸಿದರು. ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜು ಮಾಲಕರ ಸಂಘ (ರಿ) ಜಿ. ಎಂ. ಸ್ಪೋರ್ಟ್ಸ್ ಕ್ಲಬ್, ಸಂಗಮ್ ಫ್ರೆಂಡ್ಸ್ ಕ್ಲಬ್ (ರಿ), ಜಪ್ಪಿನಮೊಗರು, ಶ್ರೀ ಸುಬ್ರಮಣ್ಯ ಮಹಾ ಗಣಪತಿ ಸ್ಪೋರ್ಟ್ಸ್ ಕ್ಲಬ್, ಚೋಕುರು ಹಳೆಯಂಗಡಿ ಸಹ ಭಾಗಿತ್ವ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು