7:45 PM Friday27 - February 2026
ಬ್ರೇಕಿಂಗ್ ನ್ಯೂಸ್
ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು…

ಇತ್ತೀಚಿನ ಸುದ್ದಿ

ಮಾದಕ ವ್ಯಸನ ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯ: ಕರಾವಳಿ ಪೊಲೀಸ್ ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್

03/12/2024, 14:39

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಮಾದಕ ವ್ಯಸನಿಯು ಅಪರಾಧಿಕ ಕೃತ್ಯಗಳಲ್ಲಿ ಭಾಗವಹಿಸಿ ಜೈಲು ಶಿಕ್ಷೆಯನ್ನು ಅನುಭವಿಸುತ್ತಾನೆ. ಇದನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತ್ಯವ್ಯ ಎಂದು ಕರಾವಳಿ ಪೊಲೀಸ್ ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಹೇಳಿದರು.
ಕೇಂದ್ರ ಸರ್ಕಾರದ ಯುವಜನ ಮತ್ತು ಕ್ರಿಡಾ ಇಲಾಖೆಯ ನೆಹರು ಯುವಕ ಕೇಂದ್ರದ ಆಶ್ರಯದಲ್ಲಿ ಜಪ್ಪಿನಮೊಗರು ದಕ್ಷಿಣ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಸಭಾಭವನದಲ್ಲಿ ಇತ್ತೀಜಿಗೆ ನಡೆದ ಮಾದಕವ್ಯಸನ ಮುಕ್ತ ಸಮಾಜ ನಿರ್ಮಾಣದ ಬಗ್ಗೆ ಜನಜಾಗೃತಿ ಹಾಗೂ ಮಾದಕ ವ್ಯಸನ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ತಾಲೂಕು ವೈದ್ಯಾಧಿಕಾರಿ ಡಾ.|ಸುಜಯ ಭಂಡಾರಿ ಅವರು ಮಾತನಾಡಿ, ಮಾದಕ ದ್ರವ್ಯಗಳ ವ್ಯಸನಿಯು ತನ್ನ ದೈಹಿಕ ಆರೋಗ್ಯ ಮತ್ತು ಮಾನಸಿಕ ಆರೋಗ್ಯವನ್ನು ಕಡಿಸುವುದರ ಜೊತೆಗೆ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತಾನೆ ಎಂದು ನುಡಿದರು.


ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ವೈದ್ಯಾಧಿಕಾರಿ ಡಾ. ಎಚ್. ಆರ್. ತಿಮ್ಮಯ್ಯ ವಹಿಸಿದ್ದರು. ನೆಹರು ಯುವಕ ಕೇಂದ್ರದ ಅಧಿಕಾರಿ ಜಗದೀಶ್ ಪ್ರಸ್ತಾವನೆ ಗೈದರು.


ಅತಿಥಿಗಳಾಗಿ ಸುಧಾಕರ್. ಜೆ, ದೀಪಕ್ ಸುವರ್ಣ, ಎಂ, ದಿವಾಕರ್, ಮುರಳಿ ಕೃಷ್ಣ, ಎ .ಜನಾರ್ಧನ್, ದಿನಕರ್ ಕುಲಾಲ್ ಮೊದಲಾದವರು ಭಾಗವಹಿಸಿದ್ದು, ಜಿ.ಎಂ, ಸ್ಪೋರ್ಟ್ಸ್ ಕ್ಲಬ್ ನ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿದರು. ಸಂಗಮ್ ಫ್ರೆಂಡ್ಸ್ ಕ್ಲಬ್ ನ ಮಾಜಿ ಅಧ್ಯಕ್ಷ ಶ್ರೀನಿವಾಸ್ ಕೆ. ವಂದಿಸಿದರು. ಕೃಷ್ಣ ಶ್ರೀಯಾನ್ ನಿರೂಪಿಸಿದರು. ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜು ಮಾಲಕರ ಸಂಘ (ರಿ) ಜಿ. ಎಂ. ಸ್ಪೋರ್ಟ್ಸ್ ಕ್ಲಬ್, ಸಂಗಮ್ ಫ್ರೆಂಡ್ಸ್ ಕ್ಲಬ್ (ರಿ), ಜಪ್ಪಿನಮೊಗರು, ಶ್ರೀ ಸುಬ್ರಮಣ್ಯ ಮಹಾ ಗಣಪತಿ ಸ್ಪೋರ್ಟ್ಸ್ ಕ್ಲಬ್, ಚೋಕುರು ಹಳೆಯಂಗಡಿ ಸಹ ಭಾಗಿತ್ವ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು