2:03 AM Friday14 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ಮಾದಕ ವ್ಯಸನ ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯ: ಕರಾವಳಿ ಪೊಲೀಸ್ ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್

03/12/2024, 14:39

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಮಾದಕ ವ್ಯಸನಿಯು ಅಪರಾಧಿಕ ಕೃತ್ಯಗಳಲ್ಲಿ ಭಾಗವಹಿಸಿ ಜೈಲು ಶಿಕ್ಷೆಯನ್ನು ಅನುಭವಿಸುತ್ತಾನೆ. ಇದನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತ್ಯವ್ಯ ಎಂದು ಕರಾವಳಿ ಪೊಲೀಸ್ ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಹೇಳಿದರು.
ಕೇಂದ್ರ ಸರ್ಕಾರದ ಯುವಜನ ಮತ್ತು ಕ್ರಿಡಾ ಇಲಾಖೆಯ ನೆಹರು ಯುವಕ ಕೇಂದ್ರದ ಆಶ್ರಯದಲ್ಲಿ ಜಪ್ಪಿನಮೊಗರು ದಕ್ಷಿಣ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಸಭಾಭವನದಲ್ಲಿ ಇತ್ತೀಜಿಗೆ ನಡೆದ ಮಾದಕವ್ಯಸನ ಮುಕ್ತ ಸಮಾಜ ನಿರ್ಮಾಣದ ಬಗ್ಗೆ ಜನಜಾಗೃತಿ ಹಾಗೂ ಮಾದಕ ವ್ಯಸನ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ತಾಲೂಕು ವೈದ್ಯಾಧಿಕಾರಿ ಡಾ.|ಸುಜಯ ಭಂಡಾರಿ ಅವರು ಮಾತನಾಡಿ, ಮಾದಕ ದ್ರವ್ಯಗಳ ವ್ಯಸನಿಯು ತನ್ನ ದೈಹಿಕ ಆರೋಗ್ಯ ಮತ್ತು ಮಾನಸಿಕ ಆರೋಗ್ಯವನ್ನು ಕಡಿಸುವುದರ ಜೊತೆಗೆ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತಾನೆ ಎಂದು ನುಡಿದರು.


ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ವೈದ್ಯಾಧಿಕಾರಿ ಡಾ. ಎಚ್. ಆರ್. ತಿಮ್ಮಯ್ಯ ವಹಿಸಿದ್ದರು. ನೆಹರು ಯುವಕ ಕೇಂದ್ರದ ಅಧಿಕಾರಿ ಜಗದೀಶ್ ಪ್ರಸ್ತಾವನೆ ಗೈದರು.


ಅತಿಥಿಗಳಾಗಿ ಸುಧಾಕರ್. ಜೆ, ದೀಪಕ್ ಸುವರ್ಣ, ಎಂ, ದಿವಾಕರ್, ಮುರಳಿ ಕೃಷ್ಣ, ಎ .ಜನಾರ್ಧನ್, ದಿನಕರ್ ಕುಲಾಲ್ ಮೊದಲಾದವರು ಭಾಗವಹಿಸಿದ್ದು, ಜಿ.ಎಂ, ಸ್ಪೋರ್ಟ್ಸ್ ಕ್ಲಬ್ ನ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿದರು. ಸಂಗಮ್ ಫ್ರೆಂಡ್ಸ್ ಕ್ಲಬ್ ನ ಮಾಜಿ ಅಧ್ಯಕ್ಷ ಶ್ರೀನಿವಾಸ್ ಕೆ. ವಂದಿಸಿದರು. ಕೃಷ್ಣ ಶ್ರೀಯಾನ್ ನಿರೂಪಿಸಿದರು. ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜು ಮಾಲಕರ ಸಂಘ (ರಿ) ಜಿ. ಎಂ. ಸ್ಪೋರ್ಟ್ಸ್ ಕ್ಲಬ್, ಸಂಗಮ್ ಫ್ರೆಂಡ್ಸ್ ಕ್ಲಬ್ (ರಿ), ಜಪ್ಪಿನಮೊಗರು, ಶ್ರೀ ಸುಬ್ರಮಣ್ಯ ಮಹಾ ಗಣಪತಿ ಸ್ಪೋರ್ಟ್ಸ್ ಕ್ಲಬ್, ಚೋಕುರು ಹಳೆಯಂಗಡಿ ಸಹ ಭಾಗಿತ್ವ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು