10:38 PM Monday16 - March 2026
ಬ್ರೇಕಿಂಗ್ ನ್ಯೂಸ್
Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

ಇತ್ತೀಚಿನ ಸುದ್ದಿ

ಮಾದಕ ವ್ಯಸನ ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯ: ಕರಾವಳಿ ಪೊಲೀಸ್ ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್

03/12/2024, 14:39

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಮಾದಕ ವ್ಯಸನಿಯು ಅಪರಾಧಿಕ ಕೃತ್ಯಗಳಲ್ಲಿ ಭಾಗವಹಿಸಿ ಜೈಲು ಶಿಕ್ಷೆಯನ್ನು ಅನುಭವಿಸುತ್ತಾನೆ. ಇದನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತ್ಯವ್ಯ ಎಂದು ಕರಾವಳಿ ಪೊಲೀಸ್ ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಹೇಳಿದರು.
ಕೇಂದ್ರ ಸರ್ಕಾರದ ಯುವಜನ ಮತ್ತು ಕ್ರಿಡಾ ಇಲಾಖೆಯ ನೆಹರು ಯುವಕ ಕೇಂದ್ರದ ಆಶ್ರಯದಲ್ಲಿ ಜಪ್ಪಿನಮೊಗರು ದಕ್ಷಿಣ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಸಭಾಭವನದಲ್ಲಿ ಇತ್ತೀಜಿಗೆ ನಡೆದ ಮಾದಕವ್ಯಸನ ಮುಕ್ತ ಸಮಾಜ ನಿರ್ಮಾಣದ ಬಗ್ಗೆ ಜನಜಾಗೃತಿ ಹಾಗೂ ಮಾದಕ ವ್ಯಸನ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ತಾಲೂಕು ವೈದ್ಯಾಧಿಕಾರಿ ಡಾ.|ಸುಜಯ ಭಂಡಾರಿ ಅವರು ಮಾತನಾಡಿ, ಮಾದಕ ದ್ರವ್ಯಗಳ ವ್ಯಸನಿಯು ತನ್ನ ದೈಹಿಕ ಆರೋಗ್ಯ ಮತ್ತು ಮಾನಸಿಕ ಆರೋಗ್ಯವನ್ನು ಕಡಿಸುವುದರ ಜೊತೆಗೆ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತಾನೆ ಎಂದು ನುಡಿದರು.


ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ವೈದ್ಯಾಧಿಕಾರಿ ಡಾ. ಎಚ್. ಆರ್. ತಿಮ್ಮಯ್ಯ ವಹಿಸಿದ್ದರು. ನೆಹರು ಯುವಕ ಕೇಂದ್ರದ ಅಧಿಕಾರಿ ಜಗದೀಶ್ ಪ್ರಸ್ತಾವನೆ ಗೈದರು.


ಅತಿಥಿಗಳಾಗಿ ಸುಧಾಕರ್. ಜೆ, ದೀಪಕ್ ಸುವರ್ಣ, ಎಂ, ದಿವಾಕರ್, ಮುರಳಿ ಕೃಷ್ಣ, ಎ .ಜನಾರ್ಧನ್, ದಿನಕರ್ ಕುಲಾಲ್ ಮೊದಲಾದವರು ಭಾಗವಹಿಸಿದ್ದು, ಜಿ.ಎಂ, ಸ್ಪೋರ್ಟ್ಸ್ ಕ್ಲಬ್ ನ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿದರು. ಸಂಗಮ್ ಫ್ರೆಂಡ್ಸ್ ಕ್ಲಬ್ ನ ಮಾಜಿ ಅಧ್ಯಕ್ಷ ಶ್ರೀನಿವಾಸ್ ಕೆ. ವಂದಿಸಿದರು. ಕೃಷ್ಣ ಶ್ರೀಯಾನ್ ನಿರೂಪಿಸಿದರು. ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜು ಮಾಲಕರ ಸಂಘ (ರಿ) ಜಿ. ಎಂ. ಸ್ಪೋರ್ಟ್ಸ್ ಕ್ಲಬ್, ಸಂಗಮ್ ಫ್ರೆಂಡ್ಸ್ ಕ್ಲಬ್ (ರಿ), ಜಪ್ಪಿನಮೊಗರು, ಶ್ರೀ ಸುಬ್ರಮಣ್ಯ ಮಹಾ ಗಣಪತಿ ಸ್ಪೋರ್ಟ್ಸ್ ಕ್ಲಬ್, ಚೋಕುರು ಹಳೆಯಂಗಡಿ ಸಹ ಭಾಗಿತ್ವ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು