1:17 PM Thursday25 - December 2025
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ!

ಇತ್ತೀಚಿನ ಸುದ್ದಿ

ಮದುವೆಗೆ ಮನೆಯವರ ವಿರೋಧ; ಕಾರಿನಲ್ಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವ ಜೋಡಿ ಸಾವಿಗೆ ಶರಣು

22/05/2022, 22:11

ಬ್ರಹ್ಮಾವರ(reporterkarnataka.com): ಹೆಗ್ಗುಂಜೆ ಬಳಿ ಇಂದು ಬೆಳಗ್ಗೆ ( ಭಾನುವಾರ) ಕಾರಿನಲ್ಲೇ  ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. 

ಬೆಂಗಳೂರಿನ ಹೆಬ್ಬಾಳದ ಯಶವಂತ್ ಯಾದವ್ (23) ಮತ್ತು ಜ್ಯೋತಿ (23) ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳು. ಶನಿವಾರ ಮದುವೆ ಮಾಡಿಕೊಂಡು ಮನೆಗೆ ಕರೆಮಾಡಿದ್ದಾರೆ .  ಮನೆಯವರು ವಿರೋಧಿಸಿದ ಹಿನ್ನೆಲೆಯಲ್ಲಿ ಆತಂಕಗೊಂಡು  ಪೆಟ್ರೊಲ್ ಸುರಿದುಕೊಂಡು  ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬೈಕ್ ನಲ್ಲಿ ಹುಡುಗಿಯನ್ನು ಕರೆದುಕೊಂಡು ಬಂದ ಯಶವಂತ್ ಮಂಗಳೂರಿನ ದೇವಾಲಯದಲ್ಲಿ ಮದುವೆ ಮಾಡಿಕೊಂಡು ನಂತರ ಮನೆಗೆ ಕರೆ ಮಾಡಿದ್ದಾರೆ. ವಿರೋಧ ವ್ಯಕ್ತವಾದ ಬಳಿಕ ಆತಂಕಗೊಂಡ ಅವರು

ಆತ್ಮಹತ್ಯೆ ಮಾಡಿಕೊಳ್ಳುವ ಸಲುವಾಗಿ  ಸೆಲ್ಫ್ ಡ್ರೈವ್ ಕಾರಿನಲ್ಲಿ ಡ್ರೈವಿಂಗ್ ಮಾಡಿಕೊಂಡು ಬಾಟಲ್ ನಲ್ಲಿ ಪೆಟ್ರೋಲ್ ತುಂಬಿಕೊಂಡು ಬಂದ್ದಿದ್ದು ಹೆಗ್ಗುಂಜೆ ಸಮೀಪ ನಿರ್ಜನ ಪ್ರದೇಶದಲ್ಲಿ  ಬಾಟಲ್ ನಲ್ಲಿದ್ದ  ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದು ಬೆಳಗ್ಗೆ ಎರಡು ಗಂಟೆವರೆಗು ಸುತ್ತಾಡಿ  ನಂತರ ಆತ್ಮಹತ್ಯೆ ಮಾಡಿಕೊಂಡ ಸ್ಥಳದ ಲೊಕೇಶನ್ ಅನ್ನು ಹಾಗು ಮದುವೆ ಮಾಡಿಕೊಂಡ ಪೋಟೊ ಮನೆಯವರಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

ಬ್ರಹ್ಮಾವರ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು