5:51 AM Friday17 - July 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ

ಇತ್ತೀಚಿನ ಸುದ್ದಿ

ಮದುವೆಗೆ ಮನೆಯವರ ವಿರೋಧ; ಕಾರಿನಲ್ಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವ ಜೋಡಿ ಸಾವಿಗೆ ಶರಣು

22/05/2022, 22:11

ಬ್ರಹ್ಮಾವರ(reporterkarnataka.com): ಹೆಗ್ಗುಂಜೆ ಬಳಿ ಇಂದು ಬೆಳಗ್ಗೆ ( ಭಾನುವಾರ) ಕಾರಿನಲ್ಲೇ  ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. 

ಬೆಂಗಳೂರಿನ ಹೆಬ್ಬಾಳದ ಯಶವಂತ್ ಯಾದವ್ (23) ಮತ್ತು ಜ್ಯೋತಿ (23) ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳು. ಶನಿವಾರ ಮದುವೆ ಮಾಡಿಕೊಂಡು ಮನೆಗೆ ಕರೆಮಾಡಿದ್ದಾರೆ .  ಮನೆಯವರು ವಿರೋಧಿಸಿದ ಹಿನ್ನೆಲೆಯಲ್ಲಿ ಆತಂಕಗೊಂಡು  ಪೆಟ್ರೊಲ್ ಸುರಿದುಕೊಂಡು  ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬೈಕ್ ನಲ್ಲಿ ಹುಡುಗಿಯನ್ನು ಕರೆದುಕೊಂಡು ಬಂದ ಯಶವಂತ್ ಮಂಗಳೂರಿನ ದೇವಾಲಯದಲ್ಲಿ ಮದುವೆ ಮಾಡಿಕೊಂಡು ನಂತರ ಮನೆಗೆ ಕರೆ ಮಾಡಿದ್ದಾರೆ. ವಿರೋಧ ವ್ಯಕ್ತವಾದ ಬಳಿಕ ಆತಂಕಗೊಂಡ ಅವರು

ಆತ್ಮಹತ್ಯೆ ಮಾಡಿಕೊಳ್ಳುವ ಸಲುವಾಗಿ  ಸೆಲ್ಫ್ ಡ್ರೈವ್ ಕಾರಿನಲ್ಲಿ ಡ್ರೈವಿಂಗ್ ಮಾಡಿಕೊಂಡು ಬಾಟಲ್ ನಲ್ಲಿ ಪೆಟ್ರೋಲ್ ತುಂಬಿಕೊಂಡು ಬಂದ್ದಿದ್ದು ಹೆಗ್ಗುಂಜೆ ಸಮೀಪ ನಿರ್ಜನ ಪ್ರದೇಶದಲ್ಲಿ  ಬಾಟಲ್ ನಲ್ಲಿದ್ದ  ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದು ಬೆಳಗ್ಗೆ ಎರಡು ಗಂಟೆವರೆಗು ಸುತ್ತಾಡಿ  ನಂತರ ಆತ್ಮಹತ್ಯೆ ಮಾಡಿಕೊಂಡ ಸ್ಥಳದ ಲೊಕೇಶನ್ ಅನ್ನು ಹಾಗು ಮದುವೆ ಮಾಡಿಕೊಂಡ ಪೋಟೊ ಮನೆಯವರಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

ಬ್ರಹ್ಮಾವರ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು