3:41 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3…

ಇತ್ತೀಚಿನ ಸುದ್ದಿ

ಮದುವೆಗೆ ಮನೆಯವರ ವಿರೋಧ; ಕಾರಿನಲ್ಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವ ಜೋಡಿ ಸಾವಿಗೆ ಶರಣು

22/05/2022, 22:11

ಬ್ರಹ್ಮಾವರ(reporterkarnataka.com): ಹೆಗ್ಗುಂಜೆ ಬಳಿ ಇಂದು ಬೆಳಗ್ಗೆ ( ಭಾನುವಾರ) ಕಾರಿನಲ್ಲೇ  ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. 

ಬೆಂಗಳೂರಿನ ಹೆಬ್ಬಾಳದ ಯಶವಂತ್ ಯಾದವ್ (23) ಮತ್ತು ಜ್ಯೋತಿ (23) ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳು. ಶನಿವಾರ ಮದುವೆ ಮಾಡಿಕೊಂಡು ಮನೆಗೆ ಕರೆಮಾಡಿದ್ದಾರೆ .  ಮನೆಯವರು ವಿರೋಧಿಸಿದ ಹಿನ್ನೆಲೆಯಲ್ಲಿ ಆತಂಕಗೊಂಡು  ಪೆಟ್ರೊಲ್ ಸುರಿದುಕೊಂಡು  ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬೈಕ್ ನಲ್ಲಿ ಹುಡುಗಿಯನ್ನು ಕರೆದುಕೊಂಡು ಬಂದ ಯಶವಂತ್ ಮಂಗಳೂರಿನ ದೇವಾಲಯದಲ್ಲಿ ಮದುವೆ ಮಾಡಿಕೊಂಡು ನಂತರ ಮನೆಗೆ ಕರೆ ಮಾಡಿದ್ದಾರೆ. ವಿರೋಧ ವ್ಯಕ್ತವಾದ ಬಳಿಕ ಆತಂಕಗೊಂಡ ಅವರು

ಆತ್ಮಹತ್ಯೆ ಮಾಡಿಕೊಳ್ಳುವ ಸಲುವಾಗಿ  ಸೆಲ್ಫ್ ಡ್ರೈವ್ ಕಾರಿನಲ್ಲಿ ಡ್ರೈವಿಂಗ್ ಮಾಡಿಕೊಂಡು ಬಾಟಲ್ ನಲ್ಲಿ ಪೆಟ್ರೋಲ್ ತುಂಬಿಕೊಂಡು ಬಂದ್ದಿದ್ದು ಹೆಗ್ಗುಂಜೆ ಸಮೀಪ ನಿರ್ಜನ ಪ್ರದೇಶದಲ್ಲಿ  ಬಾಟಲ್ ನಲ್ಲಿದ್ದ  ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದು ಬೆಳಗ್ಗೆ ಎರಡು ಗಂಟೆವರೆಗು ಸುತ್ತಾಡಿ  ನಂತರ ಆತ್ಮಹತ್ಯೆ ಮಾಡಿಕೊಂಡ ಸ್ಥಳದ ಲೊಕೇಶನ್ ಅನ್ನು ಹಾಗು ಮದುವೆ ಮಾಡಿಕೊಂಡ ಪೋಟೊ ಮನೆಯವರಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

ಬ್ರಹ್ಮಾವರ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು