9:33 PM Tuesday28 - April 2026
ಬ್ರೇಕಿಂಗ್ ನ್ಯೂಸ್
Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ…

ಇತ್ತೀಚಿನ ಸುದ್ದಿ

ಮದುವೆಗೆ ಮನೆಯವರ ವಿರೋಧ; ಕಾರಿನಲ್ಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವ ಜೋಡಿ ಸಾವಿಗೆ ಶರಣು

22/05/2022, 22:11

ಬ್ರಹ್ಮಾವರ(reporterkarnataka.com): ಹೆಗ್ಗುಂಜೆ ಬಳಿ ಇಂದು ಬೆಳಗ್ಗೆ ( ಭಾನುವಾರ) ಕಾರಿನಲ್ಲೇ  ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. 

ಬೆಂಗಳೂರಿನ ಹೆಬ್ಬಾಳದ ಯಶವಂತ್ ಯಾದವ್ (23) ಮತ್ತು ಜ್ಯೋತಿ (23) ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳು. ಶನಿವಾರ ಮದುವೆ ಮಾಡಿಕೊಂಡು ಮನೆಗೆ ಕರೆಮಾಡಿದ್ದಾರೆ .  ಮನೆಯವರು ವಿರೋಧಿಸಿದ ಹಿನ್ನೆಲೆಯಲ್ಲಿ ಆತಂಕಗೊಂಡು  ಪೆಟ್ರೊಲ್ ಸುರಿದುಕೊಂಡು  ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬೈಕ್ ನಲ್ಲಿ ಹುಡುಗಿಯನ್ನು ಕರೆದುಕೊಂಡು ಬಂದ ಯಶವಂತ್ ಮಂಗಳೂರಿನ ದೇವಾಲಯದಲ್ಲಿ ಮದುವೆ ಮಾಡಿಕೊಂಡು ನಂತರ ಮನೆಗೆ ಕರೆ ಮಾಡಿದ್ದಾರೆ. ವಿರೋಧ ವ್ಯಕ್ತವಾದ ಬಳಿಕ ಆತಂಕಗೊಂಡ ಅವರು

ಆತ್ಮಹತ್ಯೆ ಮಾಡಿಕೊಳ್ಳುವ ಸಲುವಾಗಿ  ಸೆಲ್ಫ್ ಡ್ರೈವ್ ಕಾರಿನಲ್ಲಿ ಡ್ರೈವಿಂಗ್ ಮಾಡಿಕೊಂಡು ಬಾಟಲ್ ನಲ್ಲಿ ಪೆಟ್ರೋಲ್ ತುಂಬಿಕೊಂಡು ಬಂದ್ದಿದ್ದು ಹೆಗ್ಗುಂಜೆ ಸಮೀಪ ನಿರ್ಜನ ಪ್ರದೇಶದಲ್ಲಿ  ಬಾಟಲ್ ನಲ್ಲಿದ್ದ  ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದು ಬೆಳಗ್ಗೆ ಎರಡು ಗಂಟೆವರೆಗು ಸುತ್ತಾಡಿ  ನಂತರ ಆತ್ಮಹತ್ಯೆ ಮಾಡಿಕೊಂಡ ಸ್ಥಳದ ಲೊಕೇಶನ್ ಅನ್ನು ಹಾಗು ಮದುವೆ ಮಾಡಿಕೊಂಡ ಪೋಟೊ ಮನೆಯವರಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

ಬ್ರಹ್ಮಾವರ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು