6:51 AM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮದುವೆಗೆ ಮನೆಯವರ ವಿರೋಧ; ಕಾರಿನಲ್ಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವ ಜೋಡಿ ಸಾವಿಗೆ ಶರಣು

22/05/2022, 22:11

ಬ್ರಹ್ಮಾವರ(reporterkarnataka.com): ಹೆಗ್ಗುಂಜೆ ಬಳಿ ಇಂದು ಬೆಳಗ್ಗೆ ( ಭಾನುವಾರ) ಕಾರಿನಲ್ಲೇ  ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. 

ಬೆಂಗಳೂರಿನ ಹೆಬ್ಬಾಳದ ಯಶವಂತ್ ಯಾದವ್ (23) ಮತ್ತು ಜ್ಯೋತಿ (23) ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳು. ಶನಿವಾರ ಮದುವೆ ಮಾಡಿಕೊಂಡು ಮನೆಗೆ ಕರೆಮಾಡಿದ್ದಾರೆ .  ಮನೆಯವರು ವಿರೋಧಿಸಿದ ಹಿನ್ನೆಲೆಯಲ್ಲಿ ಆತಂಕಗೊಂಡು  ಪೆಟ್ರೊಲ್ ಸುರಿದುಕೊಂಡು  ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬೈಕ್ ನಲ್ಲಿ ಹುಡುಗಿಯನ್ನು ಕರೆದುಕೊಂಡು ಬಂದ ಯಶವಂತ್ ಮಂಗಳೂರಿನ ದೇವಾಲಯದಲ್ಲಿ ಮದುವೆ ಮಾಡಿಕೊಂಡು ನಂತರ ಮನೆಗೆ ಕರೆ ಮಾಡಿದ್ದಾರೆ. ವಿರೋಧ ವ್ಯಕ್ತವಾದ ಬಳಿಕ ಆತಂಕಗೊಂಡ ಅವರು

ಆತ್ಮಹತ್ಯೆ ಮಾಡಿಕೊಳ್ಳುವ ಸಲುವಾಗಿ  ಸೆಲ್ಫ್ ಡ್ರೈವ್ ಕಾರಿನಲ್ಲಿ ಡ್ರೈವಿಂಗ್ ಮಾಡಿಕೊಂಡು ಬಾಟಲ್ ನಲ್ಲಿ ಪೆಟ್ರೋಲ್ ತುಂಬಿಕೊಂಡು ಬಂದ್ದಿದ್ದು ಹೆಗ್ಗುಂಜೆ ಸಮೀಪ ನಿರ್ಜನ ಪ್ರದೇಶದಲ್ಲಿ  ಬಾಟಲ್ ನಲ್ಲಿದ್ದ  ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದು ಬೆಳಗ್ಗೆ ಎರಡು ಗಂಟೆವರೆಗು ಸುತ್ತಾಡಿ  ನಂತರ ಆತ್ಮಹತ್ಯೆ ಮಾಡಿಕೊಂಡ ಸ್ಥಳದ ಲೊಕೇಶನ್ ಅನ್ನು ಹಾಗು ಮದುವೆ ಮಾಡಿಕೊಂಡ ಪೋಟೊ ಮನೆಯವರಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

ಬ್ರಹ್ಮಾವರ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು