8:30 PM Saturday1 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಮದುವೆಗೆ ಮನೆಯವರ ವಿರೋಧ; ಕಾರಿನಲ್ಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವ ಜೋಡಿ ಸಾವಿಗೆ ಶರಣು

22/05/2022, 22:11

ಬ್ರಹ್ಮಾವರ(reporterkarnataka.com): ಹೆಗ್ಗುಂಜೆ ಬಳಿ ಇಂದು ಬೆಳಗ್ಗೆ ( ಭಾನುವಾರ) ಕಾರಿನಲ್ಲೇ  ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. 

ಬೆಂಗಳೂರಿನ ಹೆಬ್ಬಾಳದ ಯಶವಂತ್ ಯಾದವ್ (23) ಮತ್ತು ಜ್ಯೋತಿ (23) ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳು. ಶನಿವಾರ ಮದುವೆ ಮಾಡಿಕೊಂಡು ಮನೆಗೆ ಕರೆಮಾಡಿದ್ದಾರೆ .  ಮನೆಯವರು ವಿರೋಧಿಸಿದ ಹಿನ್ನೆಲೆಯಲ್ಲಿ ಆತಂಕಗೊಂಡು  ಪೆಟ್ರೊಲ್ ಸುರಿದುಕೊಂಡು  ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬೈಕ್ ನಲ್ಲಿ ಹುಡುಗಿಯನ್ನು ಕರೆದುಕೊಂಡು ಬಂದ ಯಶವಂತ್ ಮಂಗಳೂರಿನ ದೇವಾಲಯದಲ್ಲಿ ಮದುವೆ ಮಾಡಿಕೊಂಡು ನಂತರ ಮನೆಗೆ ಕರೆ ಮಾಡಿದ್ದಾರೆ. ವಿರೋಧ ವ್ಯಕ್ತವಾದ ಬಳಿಕ ಆತಂಕಗೊಂಡ ಅವರು

ಆತ್ಮಹತ್ಯೆ ಮಾಡಿಕೊಳ್ಳುವ ಸಲುವಾಗಿ  ಸೆಲ್ಫ್ ಡ್ರೈವ್ ಕಾರಿನಲ್ಲಿ ಡ್ರೈವಿಂಗ್ ಮಾಡಿಕೊಂಡು ಬಾಟಲ್ ನಲ್ಲಿ ಪೆಟ್ರೋಲ್ ತುಂಬಿಕೊಂಡು ಬಂದ್ದಿದ್ದು ಹೆಗ್ಗುಂಜೆ ಸಮೀಪ ನಿರ್ಜನ ಪ್ರದೇಶದಲ್ಲಿ  ಬಾಟಲ್ ನಲ್ಲಿದ್ದ  ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದು ಬೆಳಗ್ಗೆ ಎರಡು ಗಂಟೆವರೆಗು ಸುತ್ತಾಡಿ  ನಂತರ ಆತ್ಮಹತ್ಯೆ ಮಾಡಿಕೊಂಡ ಸ್ಥಳದ ಲೊಕೇಶನ್ ಅನ್ನು ಹಾಗು ಮದುವೆ ಮಾಡಿಕೊಂಡ ಪೋಟೊ ಮನೆಯವರಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

ಬ್ರಹ್ಮಾವರ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು