3:50 PM Friday5 - December 2025
ಬ್ರೇಕಿಂಗ್ ನ್ಯೂಸ್
New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ… ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ

ಇತ್ತೀಚಿನ ಸುದ್ದಿ

ಮದುವೆಗೆ ಮನೆಯವರ ವಿರೋಧ; ಕಾರಿನಲ್ಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವ ಜೋಡಿ ಸಾವಿಗೆ ಶರಣು

22/05/2022, 22:11

ಬ್ರಹ್ಮಾವರ(reporterkarnataka.com): ಹೆಗ್ಗುಂಜೆ ಬಳಿ ಇಂದು ಬೆಳಗ್ಗೆ ( ಭಾನುವಾರ) ಕಾರಿನಲ್ಲೇ  ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. 

ಬೆಂಗಳೂರಿನ ಹೆಬ್ಬಾಳದ ಯಶವಂತ್ ಯಾದವ್ (23) ಮತ್ತು ಜ್ಯೋತಿ (23) ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳು. ಶನಿವಾರ ಮದುವೆ ಮಾಡಿಕೊಂಡು ಮನೆಗೆ ಕರೆಮಾಡಿದ್ದಾರೆ .  ಮನೆಯವರು ವಿರೋಧಿಸಿದ ಹಿನ್ನೆಲೆಯಲ್ಲಿ ಆತಂಕಗೊಂಡು  ಪೆಟ್ರೊಲ್ ಸುರಿದುಕೊಂಡು  ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬೈಕ್ ನಲ್ಲಿ ಹುಡುಗಿಯನ್ನು ಕರೆದುಕೊಂಡು ಬಂದ ಯಶವಂತ್ ಮಂಗಳೂರಿನ ದೇವಾಲಯದಲ್ಲಿ ಮದುವೆ ಮಾಡಿಕೊಂಡು ನಂತರ ಮನೆಗೆ ಕರೆ ಮಾಡಿದ್ದಾರೆ. ವಿರೋಧ ವ್ಯಕ್ತವಾದ ಬಳಿಕ ಆತಂಕಗೊಂಡ ಅವರು

ಆತ್ಮಹತ್ಯೆ ಮಾಡಿಕೊಳ್ಳುವ ಸಲುವಾಗಿ  ಸೆಲ್ಫ್ ಡ್ರೈವ್ ಕಾರಿನಲ್ಲಿ ಡ್ರೈವಿಂಗ್ ಮಾಡಿಕೊಂಡು ಬಾಟಲ್ ನಲ್ಲಿ ಪೆಟ್ರೋಲ್ ತುಂಬಿಕೊಂಡು ಬಂದ್ದಿದ್ದು ಹೆಗ್ಗುಂಜೆ ಸಮೀಪ ನಿರ್ಜನ ಪ್ರದೇಶದಲ್ಲಿ  ಬಾಟಲ್ ನಲ್ಲಿದ್ದ  ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದು ಬೆಳಗ್ಗೆ ಎರಡು ಗಂಟೆವರೆಗು ಸುತ್ತಾಡಿ  ನಂತರ ಆತ್ಮಹತ್ಯೆ ಮಾಡಿಕೊಂಡ ಸ್ಥಳದ ಲೊಕೇಶನ್ ಅನ್ನು ಹಾಗು ಮದುವೆ ಮಾಡಿಕೊಂಡ ಪೋಟೊ ಮನೆಯವರಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

ಬ್ರಹ್ಮಾವರ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು