2:56 PM Monday2 - February 2026
ಬ್ರೇಕಿಂಗ್ ನ್ಯೂಸ್
ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ…

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ನಿಲ್ದಾಣ ಭೂಸ್ವಾಧೀನ | ಗರಿಷ್ಠ ಪರಿಹಾರ: ರಾಜ್ಯ ಸರಕಾರಕ್ಕೆ ಪದ್ಮರಾಜ್ ಆರ್. ಪೂಜಾರಿ ಅಭಿನಂದನೆ

02/09/2025, 21:39

ಮಂಗಳೂರು(reporterkarnataka.com): ಮಂಗಳೂರು ಅಂತಾರಾಷ್ಟೀಯ ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರವು (MIAGL) ಕಳೆದ ಹತ್ತು ವರ್ಷಗಳಲ್ಲಿ ಎಂದೂ ಪಾವತಿಸದಿದ್ದಷ್ಟು ಮೊತ್ತವನ್ನು ಪಾವತಿಸುವಂತೆ ಮಾಡಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆಗಾಗಿ 32.97 ಎಕರೆ ಜಾಗ ಸ್ವಾಧೀನಪಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪ್ರಸ್ತಾವನೆಗೆ ಪ್ರಕಾರ ಜಾಗ ಕಳೆದುಕೊಳ್ಳುವವರಿಗೆ ಗರಿಷ್ಠ ಪರಿಹಾರ ನೀಡುವಂತೆ ನಾನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಹಾಗು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್‌ರವರ ಗಮನ ಸೆಳೆದಿದ್ದೆ. ಜತೆಗೆ ಈ ಬಗ್ಗೆ ಸ್ಪೀಕರ್ ಯು.ಟಿ.ಖಾದರ್, ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕರಾದ ಅಶೋಕ್ವ ರೈ ವಿಧಾನಪರಿಷತ್ ಸದ್ಯರಾದ ಐವನ್ ಡಿಸೋಜ, ಮಂಜನಾಥ ಭಂಡಾರಿಯವರು ನಿರಂತರವಾಗಿ ಸರ್ಕಾರದ ಮೇಲೆ ಒತ್ತಡ ಹೇರಿದ್ದರು ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ವಿಮಾನ ನಿಲ್ದಾಣ ಪ್ರಾಧಿಕಾರ (Airport Authority) ಮಂಗಳೂರು ವಿಮಾನ ನಿಲ್ದಾಣ ಖಾಸಗಿ ಒಡೆತನದಲ್ಲಿದ್ದರೂ, ರಾಜ್ಯ ಸರ್ಕಾರಕ್ಕೆ ಮೊದಲ ಬಾರಿಗೆ ಹಣ ಪಾವತಿಸಲು ಒಪ್ಪಿದೆ. ಕಾಂಗ್ರೆಸ್ ನೇತೃತ್ವದ ಸರ್ಕಾರವು ಎಲ್ಲಾ ಫಲಾನುಭವಿಗಳಿಗೆ ಸಹಾಯ ಮಾಡಲು ಪಾರದರ್ಶಕ ರೀತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಸಲಿದೆ. ಈ ಹಿಂದೆ ಕೇಂದ್ರ ಸರ್ಕಾರ ಭೂಮಿ ಉಚಿತವಾಗಿ ನೀಡಬೇಕೆಂದು ಒತ್ತಾಯಿಸಿತ್ತು. ಆದರೆ ಸ್ಥಳೀಯ ಭೂಮಾಲೀಕರಿಗೆ ಪರಿಹಾರ ಸಿಗಲೇಬೇಕೆಂದು ರಾಜ್ಯ ಸರ್ಕಾರವು ದೃಢವಾಗಿ ನಿಂತು ಯಶಸ್ವಿಯಾಗಿದೆ. ಜನಪರ ಕಾಳಜಿಯ ಹೊಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಎಂದಿಗೂ ಜನತೆಯ ಪರವಾಗಿದೆ ಎನ್ನುವುದಕ್ಕೆ ಇದು ಒಂದು ನಿದರ್ಶನ ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು