7:13 AM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ 2 ಲಕ್ಷ ಚದರಡಿ ವಿಸ್ತಾರದ ಇನ್ನೋವೇಶನ್ ಹಬ್: ಸಚಿವ ಡಾ. ಅಶ್ವತ್ಥನಾರಾಯಣ

17/12/2022, 17:42

ಮಂಗಳೂರು(reporterkarnataka.com): ರಾಜ್ಯದ ಕರಾವಳಿ ತೀರದ ಜಿಲ್ಲೆಗಳಲ್ಲಿ ಉದ್ದಿಮೆಗಳ ಬೆಳವಣಿಗೆಯನ್ನು ಉತ್ತೇಜಿಸಲು ನಗರದಲ್ಲಿ 2 ಲಕ್ಷ ಚದರ ಅಡಿ ವಿಸ್ತಾರದ ‘ಮಂಗಳೂರು ಇನ್ನೋವೇಶನ್ ಹಬ್’ ಸ್ಥಾಪಿಸಲಾಗುವುದು. ಕಿಯೋನಿಕ್ಸ್ ಮೂಲಕ ಇದನ್ನು ನಿರ್ಮಿಸಲಾಗುವುದು. ಜತೆಗೆ ಮಂಗಳೂರು ಔದ್ಯಮಿಕ ಕ್ಲಸ್ಟರ್ ಗೆ 25 ಕೋಟಿ ರೂಪಾಯಿಗಳ ಬೀಜನಿಧಿ ಕೊಡಲಾಗಿದೆ ಎಂದು ಐಟಿ-ಬಿಟಿ ಸಚಿವ ಡಾ. ಸಿ ಎನ್. ಅಶ್ವತ್ಥ ನಾರಾಯಣ ಹೇಳಿದರು.
ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಮಂಗಳೂರು ಕ್ಲಸ್ಟರ್ ವತಿಯಿಂದ ಆಯೋಜಿಸಲಾಗಿರುವ ಮಂಗಳೂರು ಟೆಕ್ನೋವಾನ್ಜಾ ಅಂಗವಾಗಿ ಶನಿವಾರ ನಡೆದ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇನ್ಫೋಸಿಸ್ ಮತ್ತು ಇತರ ಕಂಪನಿಗಳ ಸಹಕಾರ ಪಡೆದು 2 ಲಕ್ಷ ಚದರಡಿ ವಿಸ್ತೀರ್ಣದ ಜಾಗದ ವ್ಯವಸ್ಥೆ ಮಾಡಿಕೊಂಡು ‘ಮಂಗಳೂರು ಇನ್ನೋವೇಶನ್ ಹಬ್’ ಸ್ಥಾಪಿಸಲು ಅನುವು ಮಾಡಿಕೊಡಲಾಗುವುದು. ಇದು ದಕ್ಷಿಣ ಕನ್ನಡ ಉಡುಪಿ, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉದ್ದಿಮೆಗಳ ಬೆಳವಣಿಗೆಗೆ ಇಂಬು ನೀಡಲಿದೆ ಎಂದು ತಿಳಿಸಿದರು.

ದಕ್ಷಿಣ ಕನ್ನಡ ಭಾಗವು ಮೊದಲಿನಿಂದಲೂ ಬ್ಯಾಂಕಿಂಗ್ ಚಟುವಟಿಕೆಗಳಿಗೆ ಹೆಸರಾಗಿದೆ.‌ ಅದಕ್ಕೆ ಪೂರಕವಾದ ಕಾರ್ಯ ಪರಿಸರ ಇಲ್ಲಿದೆ.‌ ಇದನ್ನು ಗಮನದಲ್ಲಿರಿಸಿಕೊಂಡು ಮಂಗಳೂರು ವಲಯವನ್ನು ಫಿನ್ ಟೆಕ್ ಹಬ್ ಆಗಿ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದು ಸಚಿವರು ವಿವರಿಸಿದರು.
ಮಂಗಳೂರು ಕ್ಲಸ್ಟರ್ ನಲ್ಲಿ 50 ಫಿನ್ಟೆಕ್ ಕಂಪನಿಗಳನ್ನು ಸ್ಥಾಪಿಸಬೇಕು ಎನ್ನುವುದು ಸರಕಾರದ ಗುರಿ ಆಗಿದೆ. ಈ ಮೂಲಕ 2030ರ ವೇಳೆಗೆ ರಾಜ್ಯವು ನಡೆಸಲು ಉದ್ದೇಶಿಸಿರುವ 500 ಬಿಲಿಯನ್ ಡಾಲರ್ ವಹಿವಾಟಿನಲ್ಲಿ ಅರ್ಧದಷ್ಟು ಕೊಡುಗೆ ಈ ಭಾಗದ ಉದ್ದಿಮೆಗಳಿಂದಲೇ ಬರುವಂತೆ ಆಗಬೇಕು ಎಂದು ಅವರು ಆಶಿಸಿದರು.

ಬೆಂಗಳೂರು ನಗರವು ದೇಶದ ಸಿಲಿಕಾನ್ ವ್ಯಾಲಿ ಎಂದು ಹೆಸರಾಗಿರುವಂತೆ ಮಂಗಳೂರು ನಗರವು ದೇಶದ ‘ಸಿಲಿಕಾನ್ ಬೀಚ್’ ಎಂದು ಹೆಸರಾಗಬೇಕೆಂದು ಇದೇ ಸಂದರ್ಭದಲ್ಲಿ ಅವರು ಆಶಿಸಿದರು.
ಇದೇ ಸಂದರ್ಭದಲ್ಲಿ ಸರ್ಕಾರವು ವಿವಿಧ ಕಂಪನಿಗಳೊಂದಿಗೆ ಒಡಂಬಡಿಕೆಗೆ ಸಹಿ ಹಾಕಿತು. ಜತೆಗೆ ಸಚಿವರು ಕ್ಯಾಶ್ ಫ್ರೀ ಕಂಪನಿಯ ಮಂಗಳೂರು ಕಚೇರಿಯನ್ನು ಉದ್ಘಾಟಿಸಿದರು.

ಸಂಸದ ನಳಿನ್ ಕುಮಾರ ಕಟೀಲ್, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಇದ್ದರು.
ಐಟಿ-ಬಿಟಿ ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ. ವಿ. ರಮಣ ರೆಡ್ಡಿ, ಉದ್ಯಮಿ ಮೋಹನ್ ದಾಸ್ ಪೈ, ಕೆಡಿಇಎಂ ಅಧ್ಯಕ್ಷ ಬಿ. ವಿ. ನಾಯ್ಡು, ರಾಜ್ಯ ಸರ್ಕಾರದ ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಐಟಿ ನಿರ್ದೇಶಕ ಡಾ.ಶಿವಶಂಕರ ಸೇರಿದಂತೆ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು