12:36 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ 2 ಲಕ್ಷ ಚದರಡಿ ವಿಸ್ತಾರದ ಇನ್ನೋವೇಶನ್ ಹಬ್: ಸಚಿವ ಡಾ. ಅಶ್ವತ್ಥನಾರಾಯಣ

17/12/2022, 17:42

ಮಂಗಳೂರು(reporterkarnataka.com): ರಾಜ್ಯದ ಕರಾವಳಿ ತೀರದ ಜಿಲ್ಲೆಗಳಲ್ಲಿ ಉದ್ದಿಮೆಗಳ ಬೆಳವಣಿಗೆಯನ್ನು ಉತ್ತೇಜಿಸಲು ನಗರದಲ್ಲಿ 2 ಲಕ್ಷ ಚದರ ಅಡಿ ವಿಸ್ತಾರದ ‘ಮಂಗಳೂರು ಇನ್ನೋವೇಶನ್ ಹಬ್’ ಸ್ಥಾಪಿಸಲಾಗುವುದು. ಕಿಯೋನಿಕ್ಸ್ ಮೂಲಕ ಇದನ್ನು ನಿರ್ಮಿಸಲಾಗುವುದು. ಜತೆಗೆ ಮಂಗಳೂರು ಔದ್ಯಮಿಕ ಕ್ಲಸ್ಟರ್ ಗೆ 25 ಕೋಟಿ ರೂಪಾಯಿಗಳ ಬೀಜನಿಧಿ ಕೊಡಲಾಗಿದೆ ಎಂದು ಐಟಿ-ಬಿಟಿ ಸಚಿವ ಡಾ. ಸಿ ಎನ್. ಅಶ್ವತ್ಥ ನಾರಾಯಣ ಹೇಳಿದರು.
ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಮಂಗಳೂರು ಕ್ಲಸ್ಟರ್ ವತಿಯಿಂದ ಆಯೋಜಿಸಲಾಗಿರುವ ಮಂಗಳೂರು ಟೆಕ್ನೋವಾನ್ಜಾ ಅಂಗವಾಗಿ ಶನಿವಾರ ನಡೆದ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇನ್ಫೋಸಿಸ್ ಮತ್ತು ಇತರ ಕಂಪನಿಗಳ ಸಹಕಾರ ಪಡೆದು 2 ಲಕ್ಷ ಚದರಡಿ ವಿಸ್ತೀರ್ಣದ ಜಾಗದ ವ್ಯವಸ್ಥೆ ಮಾಡಿಕೊಂಡು ‘ಮಂಗಳೂರು ಇನ್ನೋವೇಶನ್ ಹಬ್’ ಸ್ಥಾಪಿಸಲು ಅನುವು ಮಾಡಿಕೊಡಲಾಗುವುದು. ಇದು ದಕ್ಷಿಣ ಕನ್ನಡ ಉಡುಪಿ, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉದ್ದಿಮೆಗಳ ಬೆಳವಣಿಗೆಗೆ ಇಂಬು ನೀಡಲಿದೆ ಎಂದು ತಿಳಿಸಿದರು.

ದಕ್ಷಿಣ ಕನ್ನಡ ಭಾಗವು ಮೊದಲಿನಿಂದಲೂ ಬ್ಯಾಂಕಿಂಗ್ ಚಟುವಟಿಕೆಗಳಿಗೆ ಹೆಸರಾಗಿದೆ.‌ ಅದಕ್ಕೆ ಪೂರಕವಾದ ಕಾರ್ಯ ಪರಿಸರ ಇಲ್ಲಿದೆ.‌ ಇದನ್ನು ಗಮನದಲ್ಲಿರಿಸಿಕೊಂಡು ಮಂಗಳೂರು ವಲಯವನ್ನು ಫಿನ್ ಟೆಕ್ ಹಬ್ ಆಗಿ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದು ಸಚಿವರು ವಿವರಿಸಿದರು.
ಮಂಗಳೂರು ಕ್ಲಸ್ಟರ್ ನಲ್ಲಿ 50 ಫಿನ್ಟೆಕ್ ಕಂಪನಿಗಳನ್ನು ಸ್ಥಾಪಿಸಬೇಕು ಎನ್ನುವುದು ಸರಕಾರದ ಗುರಿ ಆಗಿದೆ. ಈ ಮೂಲಕ 2030ರ ವೇಳೆಗೆ ರಾಜ್ಯವು ನಡೆಸಲು ಉದ್ದೇಶಿಸಿರುವ 500 ಬಿಲಿಯನ್ ಡಾಲರ್ ವಹಿವಾಟಿನಲ್ಲಿ ಅರ್ಧದಷ್ಟು ಕೊಡುಗೆ ಈ ಭಾಗದ ಉದ್ದಿಮೆಗಳಿಂದಲೇ ಬರುವಂತೆ ಆಗಬೇಕು ಎಂದು ಅವರು ಆಶಿಸಿದರು.

ಬೆಂಗಳೂರು ನಗರವು ದೇಶದ ಸಿಲಿಕಾನ್ ವ್ಯಾಲಿ ಎಂದು ಹೆಸರಾಗಿರುವಂತೆ ಮಂಗಳೂರು ನಗರವು ದೇಶದ ‘ಸಿಲಿಕಾನ್ ಬೀಚ್’ ಎಂದು ಹೆಸರಾಗಬೇಕೆಂದು ಇದೇ ಸಂದರ್ಭದಲ್ಲಿ ಅವರು ಆಶಿಸಿದರು.
ಇದೇ ಸಂದರ್ಭದಲ್ಲಿ ಸರ್ಕಾರವು ವಿವಿಧ ಕಂಪನಿಗಳೊಂದಿಗೆ ಒಡಂಬಡಿಕೆಗೆ ಸಹಿ ಹಾಕಿತು. ಜತೆಗೆ ಸಚಿವರು ಕ್ಯಾಶ್ ಫ್ರೀ ಕಂಪನಿಯ ಮಂಗಳೂರು ಕಚೇರಿಯನ್ನು ಉದ್ಘಾಟಿಸಿದರು.

ಸಂಸದ ನಳಿನ್ ಕುಮಾರ ಕಟೀಲ್, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಇದ್ದರು.
ಐಟಿ-ಬಿಟಿ ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ. ವಿ. ರಮಣ ರೆಡ್ಡಿ, ಉದ್ಯಮಿ ಮೋಹನ್ ದಾಸ್ ಪೈ, ಕೆಡಿಇಎಂ ಅಧ್ಯಕ್ಷ ಬಿ. ವಿ. ನಾಯ್ಡು, ರಾಜ್ಯ ಸರ್ಕಾರದ ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಐಟಿ ನಿರ್ದೇಶಕ ಡಾ.ಶಿವಶಂಕರ ಸೇರಿದಂತೆ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು