3:01 PM Tuesday25 - November 2025
ಬ್ರೇಕಿಂಗ್ ನ್ಯೂಸ್
ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಅಪಘಾತ: ಇಬ್ಬರ ದಾರುಣ ಸಾವು; ದುರಂತಕ್ಕೆ ಕಾರಣವಾದರೂ ಏನು?

16/10/2021, 18:26

ಉಳ್ಳಾಲ(reporterkarnataka.com): ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ಇಬ್ಬರು ಯುವಕರು ಬೈಕ್​ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸಮೀಪದ ಕೆ.ಸಿ. ರೋಡ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.

ಕಾಸರಗೋಡು ಜಿಲ್ಲೆಯ ಕುಂಬ್ಳೆ ನಿವಾಸಿಗಳಾದ ಕೃಷ್ಣಪ್ರಸಾದ್ (26) ಮತ್ತು ಪ್ರಜೀತ್ (24) ಎಂಬಿಬ್ಬರು ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ. 

ನಿನ್ನೆ ರಾತ್ರಿ ಇವರಿಬ್ಬರು ದಸರಾ ಕಾರ್ಯಕ್ರಮ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ.

ಯುವಕರಿಬ್ಬರ ರಕ್ಷಣೆಗೆ ಧಾವಿಸಿದ ಕಾರು ಚಾಲಕನ ವಿರುದ್ಧವೇ ಸ್ಥಳೀಯರು ಆರೋಪಿಸಿದ್ದು, ಪೊಲೀಸರ ವಿಚಾರಣೆ ವೇಳೆ ಆತನ ತಪ್ಪಿಲ್ಲವೆಂದು ತಿಳಿದು ಬಂದಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇಬ್ಬರೂ ಹೆಲ್ಮೆಟ್ ಧರಿಸದೇ ಇರುವುದರಿಂದ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಂಬಳೆ ಕಡೆಗೆ ತೆರಳುವ ಸಂದರ್ಭ ಕಾರೊಂದು ಬೈಕ್​ಗೆ ಸ್ವಲ್ಪ ತಾಗಿದ್ದು, ಇದರಿಂದ ಗಾಬರಿಗೊಂಡ ಪರಿಣಾಮ ಕೆ.ಸಿ. ರೋಡ್ ಸೇತುವೆಗೆ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ, ಬೈಕ್ ಸ್ಕಿಡ್​ ಆಗಿದ್ದಾ? ಅಥವಾ ಕಾರು ಡಿಕ್ಕಿ ಹೊಡೆದಿದೆಯೋ ? ಎನ್ನುವ ಕುರಿತು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು