1:51 PM Wednesday19 - August 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಅಪಘಾತ: ಇಬ್ಬರ ದಾರುಣ ಸಾವು; ದುರಂತಕ್ಕೆ ಕಾರಣವಾದರೂ ಏನು?

16/10/2021, 18:26

ಉಳ್ಳಾಲ(reporterkarnataka.com): ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ಇಬ್ಬರು ಯುವಕರು ಬೈಕ್​ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸಮೀಪದ ಕೆ.ಸಿ. ರೋಡ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.

ಕಾಸರಗೋಡು ಜಿಲ್ಲೆಯ ಕುಂಬ್ಳೆ ನಿವಾಸಿಗಳಾದ ಕೃಷ್ಣಪ್ರಸಾದ್ (26) ಮತ್ತು ಪ್ರಜೀತ್ (24) ಎಂಬಿಬ್ಬರು ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ. 

ನಿನ್ನೆ ರಾತ್ರಿ ಇವರಿಬ್ಬರು ದಸರಾ ಕಾರ್ಯಕ್ರಮ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ.

ಯುವಕರಿಬ್ಬರ ರಕ್ಷಣೆಗೆ ಧಾವಿಸಿದ ಕಾರು ಚಾಲಕನ ವಿರುದ್ಧವೇ ಸ್ಥಳೀಯರು ಆರೋಪಿಸಿದ್ದು, ಪೊಲೀಸರ ವಿಚಾರಣೆ ವೇಳೆ ಆತನ ತಪ್ಪಿಲ್ಲವೆಂದು ತಿಳಿದು ಬಂದಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇಬ್ಬರೂ ಹೆಲ್ಮೆಟ್ ಧರಿಸದೇ ಇರುವುದರಿಂದ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಂಬಳೆ ಕಡೆಗೆ ತೆರಳುವ ಸಂದರ್ಭ ಕಾರೊಂದು ಬೈಕ್​ಗೆ ಸ್ವಲ್ಪ ತಾಗಿದ್ದು, ಇದರಿಂದ ಗಾಬರಿಗೊಂಡ ಪರಿಣಾಮ ಕೆ.ಸಿ. ರೋಡ್ ಸೇತುವೆಗೆ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ, ಬೈಕ್ ಸ್ಕಿಡ್​ ಆಗಿದ್ದಾ? ಅಥವಾ ಕಾರು ಡಿಕ್ಕಿ ಹೊಡೆದಿದೆಯೋ ? ಎನ್ನುವ ಕುರಿತು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು