7:54 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಅಪಘಾತ: ಇಬ್ಬರ ದಾರುಣ ಸಾವು; ದುರಂತಕ್ಕೆ ಕಾರಣವಾದರೂ ಏನು?

16/10/2021, 18:26

ಉಳ್ಳಾಲ(reporterkarnataka.com): ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ಇಬ್ಬರು ಯುವಕರು ಬೈಕ್​ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸಮೀಪದ ಕೆ.ಸಿ. ರೋಡ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.

ಕಾಸರಗೋಡು ಜಿಲ್ಲೆಯ ಕುಂಬ್ಳೆ ನಿವಾಸಿಗಳಾದ ಕೃಷ್ಣಪ್ರಸಾದ್ (26) ಮತ್ತು ಪ್ರಜೀತ್ (24) ಎಂಬಿಬ್ಬರು ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ. 

ನಿನ್ನೆ ರಾತ್ರಿ ಇವರಿಬ್ಬರು ದಸರಾ ಕಾರ್ಯಕ್ರಮ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ.

ಯುವಕರಿಬ್ಬರ ರಕ್ಷಣೆಗೆ ಧಾವಿಸಿದ ಕಾರು ಚಾಲಕನ ವಿರುದ್ಧವೇ ಸ್ಥಳೀಯರು ಆರೋಪಿಸಿದ್ದು, ಪೊಲೀಸರ ವಿಚಾರಣೆ ವೇಳೆ ಆತನ ತಪ್ಪಿಲ್ಲವೆಂದು ತಿಳಿದು ಬಂದಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇಬ್ಬರೂ ಹೆಲ್ಮೆಟ್ ಧರಿಸದೇ ಇರುವುದರಿಂದ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಂಬಳೆ ಕಡೆಗೆ ತೆರಳುವ ಸಂದರ್ಭ ಕಾರೊಂದು ಬೈಕ್​ಗೆ ಸ್ವಲ್ಪ ತಾಗಿದ್ದು, ಇದರಿಂದ ಗಾಬರಿಗೊಂಡ ಪರಿಣಾಮ ಕೆ.ಸಿ. ರೋಡ್ ಸೇತುವೆಗೆ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ, ಬೈಕ್ ಸ್ಕಿಡ್​ ಆಗಿದ್ದಾ? ಅಥವಾ ಕಾರು ಡಿಕ್ಕಿ ಹೊಡೆದಿದೆಯೋ ? ಎನ್ನುವ ಕುರಿತು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು