12:58 AM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಅಪಘಾತ: ಇಬ್ಬರ ದಾರುಣ ಸಾವು; ದುರಂತಕ್ಕೆ ಕಾರಣವಾದರೂ ಏನು?

16/10/2021, 18:26

ಉಳ್ಳಾಲ(reporterkarnataka.com): ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ಇಬ್ಬರು ಯುವಕರು ಬೈಕ್​ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸಮೀಪದ ಕೆ.ಸಿ. ರೋಡ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.

ಕಾಸರಗೋಡು ಜಿಲ್ಲೆಯ ಕುಂಬ್ಳೆ ನಿವಾಸಿಗಳಾದ ಕೃಷ್ಣಪ್ರಸಾದ್ (26) ಮತ್ತು ಪ್ರಜೀತ್ (24) ಎಂಬಿಬ್ಬರು ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ. 

ನಿನ್ನೆ ರಾತ್ರಿ ಇವರಿಬ್ಬರು ದಸರಾ ಕಾರ್ಯಕ್ರಮ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ.

ಯುವಕರಿಬ್ಬರ ರಕ್ಷಣೆಗೆ ಧಾವಿಸಿದ ಕಾರು ಚಾಲಕನ ವಿರುದ್ಧವೇ ಸ್ಥಳೀಯರು ಆರೋಪಿಸಿದ್ದು, ಪೊಲೀಸರ ವಿಚಾರಣೆ ವೇಳೆ ಆತನ ತಪ್ಪಿಲ್ಲವೆಂದು ತಿಳಿದು ಬಂದಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇಬ್ಬರೂ ಹೆಲ್ಮೆಟ್ ಧರಿಸದೇ ಇರುವುದರಿಂದ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಂಬಳೆ ಕಡೆಗೆ ತೆರಳುವ ಸಂದರ್ಭ ಕಾರೊಂದು ಬೈಕ್​ಗೆ ಸ್ವಲ್ಪ ತಾಗಿದ್ದು, ಇದರಿಂದ ಗಾಬರಿಗೊಂಡ ಪರಿಣಾಮ ಕೆ.ಸಿ. ರೋಡ್ ಸೇತುವೆಗೆ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ, ಬೈಕ್ ಸ್ಕಿಡ್​ ಆಗಿದ್ದಾ? ಅಥವಾ ಕಾರು ಡಿಕ್ಕಿ ಹೊಡೆದಿದೆಯೋ ? ಎನ್ನುವ ಕುರಿತು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು