12:34 PM Saturday28 - February 2026
ಬ್ರೇಕಿಂಗ್ ನ್ಯೂಸ್
ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಅಪಘಾತ: ಇಬ್ಬರ ದಾರುಣ ಸಾವು; ದುರಂತಕ್ಕೆ ಕಾರಣವಾದರೂ ಏನು?

16/10/2021, 18:26

ಉಳ್ಳಾಲ(reporterkarnataka.com): ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ಇಬ್ಬರು ಯುವಕರು ಬೈಕ್​ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸಮೀಪದ ಕೆ.ಸಿ. ರೋಡ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.

ಕಾಸರಗೋಡು ಜಿಲ್ಲೆಯ ಕುಂಬ್ಳೆ ನಿವಾಸಿಗಳಾದ ಕೃಷ್ಣಪ್ರಸಾದ್ (26) ಮತ್ತು ಪ್ರಜೀತ್ (24) ಎಂಬಿಬ್ಬರು ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ. 

ನಿನ್ನೆ ರಾತ್ರಿ ಇವರಿಬ್ಬರು ದಸರಾ ಕಾರ್ಯಕ್ರಮ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ.

ಯುವಕರಿಬ್ಬರ ರಕ್ಷಣೆಗೆ ಧಾವಿಸಿದ ಕಾರು ಚಾಲಕನ ವಿರುದ್ಧವೇ ಸ್ಥಳೀಯರು ಆರೋಪಿಸಿದ್ದು, ಪೊಲೀಸರ ವಿಚಾರಣೆ ವೇಳೆ ಆತನ ತಪ್ಪಿಲ್ಲವೆಂದು ತಿಳಿದು ಬಂದಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇಬ್ಬರೂ ಹೆಲ್ಮೆಟ್ ಧರಿಸದೇ ಇರುವುದರಿಂದ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಂಬಳೆ ಕಡೆಗೆ ತೆರಳುವ ಸಂದರ್ಭ ಕಾರೊಂದು ಬೈಕ್​ಗೆ ಸ್ವಲ್ಪ ತಾಗಿದ್ದು, ಇದರಿಂದ ಗಾಬರಿಗೊಂಡ ಪರಿಣಾಮ ಕೆ.ಸಿ. ರೋಡ್ ಸೇತುವೆಗೆ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ, ಬೈಕ್ ಸ್ಕಿಡ್​ ಆಗಿದ್ದಾ? ಅಥವಾ ಕಾರು ಡಿಕ್ಕಿ ಹೊಡೆದಿದೆಯೋ ? ಎನ್ನುವ ಕುರಿತು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು