12:49 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಅಪಘಾತ: ಇಬ್ಬರ ದಾರುಣ ಸಾವು; ದುರಂತಕ್ಕೆ ಕಾರಣವಾದರೂ ಏನು?

16/10/2021, 18:26

ಉಳ್ಳಾಲ(reporterkarnataka.com): ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ಇಬ್ಬರು ಯುವಕರು ಬೈಕ್​ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸಮೀಪದ ಕೆ.ಸಿ. ರೋಡ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.

ಕಾಸರಗೋಡು ಜಿಲ್ಲೆಯ ಕುಂಬ್ಳೆ ನಿವಾಸಿಗಳಾದ ಕೃಷ್ಣಪ್ರಸಾದ್ (26) ಮತ್ತು ಪ್ರಜೀತ್ (24) ಎಂಬಿಬ್ಬರು ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ. 

ನಿನ್ನೆ ರಾತ್ರಿ ಇವರಿಬ್ಬರು ದಸರಾ ಕಾರ್ಯಕ್ರಮ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ.

ಯುವಕರಿಬ್ಬರ ರಕ್ಷಣೆಗೆ ಧಾವಿಸಿದ ಕಾರು ಚಾಲಕನ ವಿರುದ್ಧವೇ ಸ್ಥಳೀಯರು ಆರೋಪಿಸಿದ್ದು, ಪೊಲೀಸರ ವಿಚಾರಣೆ ವೇಳೆ ಆತನ ತಪ್ಪಿಲ್ಲವೆಂದು ತಿಳಿದು ಬಂದಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇಬ್ಬರೂ ಹೆಲ್ಮೆಟ್ ಧರಿಸದೇ ಇರುವುದರಿಂದ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಂಬಳೆ ಕಡೆಗೆ ತೆರಳುವ ಸಂದರ್ಭ ಕಾರೊಂದು ಬೈಕ್​ಗೆ ಸ್ವಲ್ಪ ತಾಗಿದ್ದು, ಇದರಿಂದ ಗಾಬರಿಗೊಂಡ ಪರಿಣಾಮ ಕೆ.ಸಿ. ರೋಡ್ ಸೇತುವೆಗೆ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ, ಬೈಕ್ ಸ್ಕಿಡ್​ ಆಗಿದ್ದಾ? ಅಥವಾ ಕಾರು ಡಿಕ್ಕಿ ಹೊಡೆದಿದೆಯೋ ? ಎನ್ನುವ ಕುರಿತು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು