5:25 AM Wednesday24 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಅಪಘಾತ: ಇಬ್ಬರ ದಾರುಣ ಸಾವು; ದುರಂತಕ್ಕೆ ಕಾರಣವಾದರೂ ಏನು?

16/10/2021, 18:26

ಉಳ್ಳಾಲ(reporterkarnataka.com): ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ಇಬ್ಬರು ಯುವಕರು ಬೈಕ್​ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸಮೀಪದ ಕೆ.ಸಿ. ರೋಡ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.

ಕಾಸರಗೋಡು ಜಿಲ್ಲೆಯ ಕುಂಬ್ಳೆ ನಿವಾಸಿಗಳಾದ ಕೃಷ್ಣಪ್ರಸಾದ್ (26) ಮತ್ತು ಪ್ರಜೀತ್ (24) ಎಂಬಿಬ್ಬರು ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ. 

ನಿನ್ನೆ ರಾತ್ರಿ ಇವರಿಬ್ಬರು ದಸರಾ ಕಾರ್ಯಕ್ರಮ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ.

ಯುವಕರಿಬ್ಬರ ರಕ್ಷಣೆಗೆ ಧಾವಿಸಿದ ಕಾರು ಚಾಲಕನ ವಿರುದ್ಧವೇ ಸ್ಥಳೀಯರು ಆರೋಪಿಸಿದ್ದು, ಪೊಲೀಸರ ವಿಚಾರಣೆ ವೇಳೆ ಆತನ ತಪ್ಪಿಲ್ಲವೆಂದು ತಿಳಿದು ಬಂದಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇಬ್ಬರೂ ಹೆಲ್ಮೆಟ್ ಧರಿಸದೇ ಇರುವುದರಿಂದ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಂಬಳೆ ಕಡೆಗೆ ತೆರಳುವ ಸಂದರ್ಭ ಕಾರೊಂದು ಬೈಕ್​ಗೆ ಸ್ವಲ್ಪ ತಾಗಿದ್ದು, ಇದರಿಂದ ಗಾಬರಿಗೊಂಡ ಪರಿಣಾಮ ಕೆ.ಸಿ. ರೋಡ್ ಸೇತುವೆಗೆ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ, ಬೈಕ್ ಸ್ಕಿಡ್​ ಆಗಿದ್ದಾ? ಅಥವಾ ಕಾರು ಡಿಕ್ಕಿ ಹೊಡೆದಿದೆಯೋ ? ಎನ್ನುವ ಕುರಿತು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು