5:33 PM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

ಮಣಿಪುರದಲ್ಲಿ ಕ್ರೈಸ್ತರ ಮೇಲೆ ದೌರ್ಜನ್ಯ: ಮಂಗಳೂರಿನಲ್ಲಿ ಸಮಾನ ಮನಸ್ಕರ ಪ್ರತಿಭಟನೆ; ಕೇಂದ್ರ ಸರಕಾರ ಮಧ್ಯಪ್ರವೇಶಕ್ಕೆ ಆಗ್ರಹ

06/06/2023, 22:22

ಮಂಗಳೂರು(reporterkarnataka.com): ಮಣಿಪುರದಲ್ಲಿ ಕ್ರಿಶ್ಚಿಯನರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಮಂಗಳವಾರ ಮಂಗಳೂರಿನ ಕ್ಲಾಕ್ ಟವರ್ ಬಳಿ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ, ದ.ಕ.ಜಿಲ್ಲೆ, ಮಂಗಳೂರು ಕಥೊಲಿಕ್ ಸಭಾ ಮಂಗಳೂರು ಪ್ರದೇಶ(ರಿ) ಯುನೈಟೆಡ್ ಕ್ರಿಶ್ಚಿಯನ್ ಫೋರಂ,ಮಂಗಳೂರು ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.


ಮಣಿಪುರ ರಾಜ್ಯದಲ್ಲಿ ಬುಡಕಟ್ಟು ಜನರ ಮೀಸಲಾತಿ ವಿಚಾರದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಚರ್ಚ್ ಗಳು ಹಾಗೂ ಕ್ರಿಶ್ಚಿಯನ್ ರ ಮೇಲೆ ನಡೆದ ವ್ಯಾಪಕ ದಾಳಿಯನ್ನು ಖಂಡಿಸಿದರು. ಮಣಿಪುರದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮುಖಂಡರು ಆಗ್ರಹಿಸಿದರು.
ಮಣಿಪುರದಲ್ಲಿ ಬಹುಸಂಖ್ಯಾತರಾಗಿರುವ ಕ್ರಿಸ್ಚಿಯನ್ ಸಮುದಾಯದ ನಡುವೆ ಸೌಹಾರ್ದ ವಾತಾವರಣವನ್ನು ಸಾಧಿಸುವ ಬದಲು, ಅಲ್ಲಿನ ಬಿಜೆಪಿ ರಾಜ್ಯ ಸರಕಾರವು ದ್ವೇಷದ ರಾಜಕಾರಣವನ್ನು ನಡೆಸುತ್ತಿದೆ. ಮೈತೈ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರದಲ್ಲಿ ಭುಗಿಲೆದ್ದ ಗಲಭೆ ಮುಂದಿಟ್ಟು ಕ್ರಿಶ್ಚಿಯನ್ನರ ಹಾಗೂ ಅವರ ಚರ್ಚ್ ಗಳ ಮೇಲೆ ವ್ಯಾಪಕ ದಾಳಿಗಳನ್ನು ನಡೆಸುತ್ತಿರುವ ದೌರ್ಜನ್ಯ ನಿಲ್ಲಬೇಕು. ಸಾಕಷ್ಟು ಸಂಖ್ಯೆಯ ಜನರು ಸಂತ್ರಸ್ತರಾಗಿದ್ದಾರೆ. ಕರ್ಫ್ಯೂ ಕೂಡ ಹಾಕಲಾಗಿದೆ. ದೂರಸಂಪರ್ಕ,ಇಂಟರ್ ನೆಟ್ ಸೇರಿದಂತೆ ಎಲ್ಲಾ ಸಂಪರ್ಕಗಳನ್ನು ಕಡಿತಗೊಳಿಸಲಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ದೇಶದ ಒಂದು ಪುಟ್ಟ ರಾಜ್ಯದಲ್ಲಿ ಇಂತಹ ಗಂಭೀರ ಸಮಸ್ಯೆ ತಲೆದೋರಿದೆ. ಆದರೆ ಕೇಂದ್ರ ಸರಕಾರವು ಯಾವುದೇ ಕ್ರಮಕ್ಕೆ ಮುಂದಾಗದೇ ಇರುವುದು ಖಂಡನೀಯ ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
ರೊಯ್ ಕ್ಯಾಸ್ಟಲಿನೊ ಅವರು ಮಾತನಾಡಿ, ಮಣಿಪುರ ರಾಜ್ಯದಲ್ಲಿ ಗಲಭೆಯನ್ನು ಸಂಪೂರ್ಣವಾಗಿ ನಿಯಂತ್ರಿಸಿ, ಮತ್ತೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು. ತೀರ ಕಡಿಮೆ ಜನಸಂಖ್ಯೆಯ ಮಣಿಪುರ, ರಾಜಕೀಯ ಮತ್ತು ಸಾಮಾಜಿಕವಾಗಿ ಅಸಮತೋಲನದಿಂದ ಕೂಡಿದೆ. ಇಲ್ಲಿನ ಬುಡಕಟ್ಟು ಜನರು ಶಾಂತಿಯುತವಾಗಿ ಮೀಸಲಾತಿಗಾಗಿ ಮೆರವಣಿಗೆ ನಡೆಸಿದರು. ಆದರೆ ಇದನ್ನು ಸಮಾಜ ವಿರೋಧಿ ಶಕ್ತಿಗಳು ಹಿಂಸಾಚಾರಕ್ಕೆ ತಿರುಗಿಸಿದ್ದಾರೆ ಎಂದರು.
ಸುನಿಲ್ ಕುಮಾರ್ ಬಜಾಲ್, ಆಲ್ಫ್ರೆಡ್ ಮನೋಹರ್, ಸ್ಟ್ಯಾನಿ ಲೋಬೊ, ಕೆ ಅಶ್ರಫ್, ಮಂಜುಳಾ ನಾಯಕ್, ಫಾದರ್ ಮ್ಯಾಕ್ಸಿಂ ನೊರೊನ್ಹಾ, ಆಲ್ಫ್ರೆಡ್, ಅನಿಲ್ ಸಿಕ್ವೇರ, ನೊರಿನಾ ಪಿಂಟೋ, ಮೊಹಮದ್ ಕುಂಜತ್ತಬೈಲ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು