2:44 PM Friday24 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ಇಂದು ಮಂಗಳೂರಿಗೆ: ಯಾವುದೆಲ್ಲ ಕಾರ್ಯಕ್ರಮಗಳಲ್ಲಿ ಸಿಎಂ ಪಾಲ್ಗೊಳ್ಳುವರು? ಮುಂದಕ್ಕೆ ಓದಿ

12/08/2021, 08:32

ಮಂಗಳೂರು(reporterkarnataka.com): ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಸ್ಟ್ 12ರಂದು ಮಂಗಳೂರಿಗೆ ಆಗಮಿಸುವರು. ಸಿಎಂ ಆದ ಬಳಿಕ ಇದು ಅವರ ಮೊದಲ ಭೇಟಿಯಾಗಿದೆ.

ಮುಖ್ಯಮಂತ್ರಿಯವರು 12ರಂದು ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದಲ್ಲಿ ಮಂಗಳೂರಿಗೆ 10.50ಕ್ಕೆ ಆಗಮಿಸುವರು. ರಸ್ತೆಯ ಮೂಲಕ 11.20ಕ್ಕೆ ಜಿಲ್ಲಾ ಪಂಚಾಯಿತಿ ಕಚೇರಿಗೆ ತಲುಪುವರು. 11.30ಕ್ಕೆ ಕೋವಿಡ್ 19 ಕುರಿತಂತೆ ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸುವರು. ಈ ಮಧ್ಯೆ ವೆನ್ಲಾಕ್ ನಲ್ಲಿ 36 ಬೆಡ್ ನ ಐಸಿಯು ವಿಭಾಗವನ್ನು ಉದ್ಘಾಟಿಸುವರು. ಉರ್ವ ಸಮೀಪದ ಅಂಬೇಡ್ಕರ್ ಭವನವನ್ನು ಕೂಡ ಉದ್ಘಾಟಿಸುವ ಕಾರ್ಯಕ್ರಮವಿದೆ.

ಮಧ್ಯಾಹ್ನ 2.30ಕ್ಕೆ ರಸ್ತೆ ಮೂಲಕ ಉಡುಪಿಗೆ ಭೇಟಿ ನೀಡುವರು. ಸಂಜೆ 4 ಗಂಟೆಗೆ ಉಡುಪಿ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಕುರಿತು ಉಡುಪಿ ಜಿಪಂ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸುವರು. ರಾತ್ರಿ 8 ಗಂಟೆಗೆ ಮಂಗಳೂರಿಗೆ ಆಗಮುಸಿ ವಾಸ್ತವ್ಯ ಹೂಡುವರು.

ಇತ್ತೀಚಿನ ಸುದ್ದಿ

ಜಾಹೀರಾತು