11:08 PM Thursday9 - April 2026
ಬ್ರೇಕಿಂಗ್ ನ್ಯೂಸ್
Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ಇಂದು ಮಂಗಳೂರಿಗೆ: ಯಾವುದೆಲ್ಲ ಕಾರ್ಯಕ್ರಮಗಳಲ್ಲಿ ಸಿಎಂ ಪಾಲ್ಗೊಳ್ಳುವರು? ಮುಂದಕ್ಕೆ ಓದಿ

12/08/2021, 08:32

ಮಂಗಳೂರು(reporterkarnataka.com): ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಸ್ಟ್ 12ರಂದು ಮಂಗಳೂರಿಗೆ ಆಗಮಿಸುವರು. ಸಿಎಂ ಆದ ಬಳಿಕ ಇದು ಅವರ ಮೊದಲ ಭೇಟಿಯಾಗಿದೆ.

ಮುಖ್ಯಮಂತ್ರಿಯವರು 12ರಂದು ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದಲ್ಲಿ ಮಂಗಳೂರಿಗೆ 10.50ಕ್ಕೆ ಆಗಮಿಸುವರು. ರಸ್ತೆಯ ಮೂಲಕ 11.20ಕ್ಕೆ ಜಿಲ್ಲಾ ಪಂಚಾಯಿತಿ ಕಚೇರಿಗೆ ತಲುಪುವರು. 11.30ಕ್ಕೆ ಕೋವಿಡ್ 19 ಕುರಿತಂತೆ ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸುವರು. ಈ ಮಧ್ಯೆ ವೆನ್ಲಾಕ್ ನಲ್ಲಿ 36 ಬೆಡ್ ನ ಐಸಿಯು ವಿಭಾಗವನ್ನು ಉದ್ಘಾಟಿಸುವರು. ಉರ್ವ ಸಮೀಪದ ಅಂಬೇಡ್ಕರ್ ಭವನವನ್ನು ಕೂಡ ಉದ್ಘಾಟಿಸುವ ಕಾರ್ಯಕ್ರಮವಿದೆ.

ಮಧ್ಯಾಹ್ನ 2.30ಕ್ಕೆ ರಸ್ತೆ ಮೂಲಕ ಉಡುಪಿಗೆ ಭೇಟಿ ನೀಡುವರು. ಸಂಜೆ 4 ಗಂಟೆಗೆ ಉಡುಪಿ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಕುರಿತು ಉಡುಪಿ ಜಿಪಂ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸುವರು. ರಾತ್ರಿ 8 ಗಂಟೆಗೆ ಮಂಗಳೂರಿಗೆ ಆಗಮುಸಿ ವಾಸ್ತವ್ಯ ಹೂಡುವರು.

ಇತ್ತೀಚಿನ ಸುದ್ದಿ

ಜಾಹೀರಾತು