5:38 PM Friday14 - August 2026
ಬ್ರೇಕಿಂಗ್ ನ್ಯೂಸ್
ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ಇಂದು ಮಂಗಳೂರಿಗೆ: ಯಾವುದೆಲ್ಲ ಕಾರ್ಯಕ್ರಮಗಳಲ್ಲಿ ಸಿಎಂ ಪಾಲ್ಗೊಳ್ಳುವರು? ಮುಂದಕ್ಕೆ ಓದಿ

12/08/2021, 08:32

ಮಂಗಳೂರು(reporterkarnataka.com): ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಸ್ಟ್ 12ರಂದು ಮಂಗಳೂರಿಗೆ ಆಗಮಿಸುವರು. ಸಿಎಂ ಆದ ಬಳಿಕ ಇದು ಅವರ ಮೊದಲ ಭೇಟಿಯಾಗಿದೆ.

ಮುಖ್ಯಮಂತ್ರಿಯವರು 12ರಂದು ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದಲ್ಲಿ ಮಂಗಳೂರಿಗೆ 10.50ಕ್ಕೆ ಆಗಮಿಸುವರು. ರಸ್ತೆಯ ಮೂಲಕ 11.20ಕ್ಕೆ ಜಿಲ್ಲಾ ಪಂಚಾಯಿತಿ ಕಚೇರಿಗೆ ತಲುಪುವರು. 11.30ಕ್ಕೆ ಕೋವಿಡ್ 19 ಕುರಿತಂತೆ ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸುವರು. ಈ ಮಧ್ಯೆ ವೆನ್ಲಾಕ್ ನಲ್ಲಿ 36 ಬೆಡ್ ನ ಐಸಿಯು ವಿಭಾಗವನ್ನು ಉದ್ಘಾಟಿಸುವರು. ಉರ್ವ ಸಮೀಪದ ಅಂಬೇಡ್ಕರ್ ಭವನವನ್ನು ಕೂಡ ಉದ್ಘಾಟಿಸುವ ಕಾರ್ಯಕ್ರಮವಿದೆ.

ಮಧ್ಯಾಹ್ನ 2.30ಕ್ಕೆ ರಸ್ತೆ ಮೂಲಕ ಉಡುಪಿಗೆ ಭೇಟಿ ನೀಡುವರು. ಸಂಜೆ 4 ಗಂಟೆಗೆ ಉಡುಪಿ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಕುರಿತು ಉಡುಪಿ ಜಿಪಂ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸುವರು. ರಾತ್ರಿ 8 ಗಂಟೆಗೆ ಮಂಗಳೂರಿಗೆ ಆಗಮುಸಿ ವಾಸ್ತವ್ಯ ಹೂಡುವರು.

ಇತ್ತೀಚಿನ ಸುದ್ದಿ

ಜಾಹೀರಾತು