5:37 AM Monday15 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ಇಂದು ಮಂಗಳೂರಿಗೆ: ಯಾವುದೆಲ್ಲ ಕಾರ್ಯಕ್ರಮಗಳಲ್ಲಿ ಸಿಎಂ ಪಾಲ್ಗೊಳ್ಳುವರು? ಮುಂದಕ್ಕೆ ಓದಿ

12/08/2021, 08:32

ಮಂಗಳೂರು(reporterkarnataka.com): ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಸ್ಟ್ 12ರಂದು ಮಂಗಳೂರಿಗೆ ಆಗಮಿಸುವರು. ಸಿಎಂ ಆದ ಬಳಿಕ ಇದು ಅವರ ಮೊದಲ ಭೇಟಿಯಾಗಿದೆ.

ಮುಖ್ಯಮಂತ್ರಿಯವರು 12ರಂದು ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದಲ್ಲಿ ಮಂಗಳೂರಿಗೆ 10.50ಕ್ಕೆ ಆಗಮಿಸುವರು. ರಸ್ತೆಯ ಮೂಲಕ 11.20ಕ್ಕೆ ಜಿಲ್ಲಾ ಪಂಚಾಯಿತಿ ಕಚೇರಿಗೆ ತಲುಪುವರು. 11.30ಕ್ಕೆ ಕೋವಿಡ್ 19 ಕುರಿತಂತೆ ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸುವರು. ಈ ಮಧ್ಯೆ ವೆನ್ಲಾಕ್ ನಲ್ಲಿ 36 ಬೆಡ್ ನ ಐಸಿಯು ವಿಭಾಗವನ್ನು ಉದ್ಘಾಟಿಸುವರು. ಉರ್ವ ಸಮೀಪದ ಅಂಬೇಡ್ಕರ್ ಭವನವನ್ನು ಕೂಡ ಉದ್ಘಾಟಿಸುವ ಕಾರ್ಯಕ್ರಮವಿದೆ.

ಮಧ್ಯಾಹ್ನ 2.30ಕ್ಕೆ ರಸ್ತೆ ಮೂಲಕ ಉಡುಪಿಗೆ ಭೇಟಿ ನೀಡುವರು. ಸಂಜೆ 4 ಗಂಟೆಗೆ ಉಡುಪಿ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಕುರಿತು ಉಡುಪಿ ಜಿಪಂ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸುವರು. ರಾತ್ರಿ 8 ಗಂಟೆಗೆ ಮಂಗಳೂರಿಗೆ ಆಗಮುಸಿ ವಾಸ್ತವ್ಯ ಹೂಡುವರು.

ಇತ್ತೀಚಿನ ಸುದ್ದಿ

ಜಾಹೀರಾತು