12:03 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ಇಂದು ಮಂಗಳೂರಿಗೆ: ಯಾವುದೆಲ್ಲ ಕಾರ್ಯಕ್ರಮಗಳಲ್ಲಿ ಸಿಎಂ ಪಾಲ್ಗೊಳ್ಳುವರು? ಮುಂದಕ್ಕೆ ಓದಿ

12/08/2021, 08:32

ಮಂಗಳೂರು(reporterkarnataka.com): ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಸ್ಟ್ 12ರಂದು ಮಂಗಳೂರಿಗೆ ಆಗಮಿಸುವರು. ಸಿಎಂ ಆದ ಬಳಿಕ ಇದು ಅವರ ಮೊದಲ ಭೇಟಿಯಾಗಿದೆ.

ಮುಖ್ಯಮಂತ್ರಿಯವರು 12ರಂದು ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದಲ್ಲಿ ಮಂಗಳೂರಿಗೆ 10.50ಕ್ಕೆ ಆಗಮಿಸುವರು. ರಸ್ತೆಯ ಮೂಲಕ 11.20ಕ್ಕೆ ಜಿಲ್ಲಾ ಪಂಚಾಯಿತಿ ಕಚೇರಿಗೆ ತಲುಪುವರು. 11.30ಕ್ಕೆ ಕೋವಿಡ್ 19 ಕುರಿತಂತೆ ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸುವರು. ಈ ಮಧ್ಯೆ ವೆನ್ಲಾಕ್ ನಲ್ಲಿ 36 ಬೆಡ್ ನ ಐಸಿಯು ವಿಭಾಗವನ್ನು ಉದ್ಘಾಟಿಸುವರು. ಉರ್ವ ಸಮೀಪದ ಅಂಬೇಡ್ಕರ್ ಭವನವನ್ನು ಕೂಡ ಉದ್ಘಾಟಿಸುವ ಕಾರ್ಯಕ್ರಮವಿದೆ.

ಮಧ್ಯಾಹ್ನ 2.30ಕ್ಕೆ ರಸ್ತೆ ಮೂಲಕ ಉಡುಪಿಗೆ ಭೇಟಿ ನೀಡುವರು. ಸಂಜೆ 4 ಗಂಟೆಗೆ ಉಡುಪಿ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಕುರಿತು ಉಡುಪಿ ಜಿಪಂ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸುವರು. ರಾತ್ರಿ 8 ಗಂಟೆಗೆ ಮಂಗಳೂರಿಗೆ ಆಗಮುಸಿ ವಾಸ್ತವ್ಯ ಹೂಡುವರು.

ಇತ್ತೀಚಿನ ಸುದ್ದಿ

ಜಾಹೀರಾತು