10:40 PM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ಇಂದು ಮಂಗಳೂರಿಗೆ: ಯಾವುದೆಲ್ಲ ಕಾರ್ಯಕ್ರಮಗಳಲ್ಲಿ ಸಿಎಂ ಪಾಲ್ಗೊಳ್ಳುವರು? ಮುಂದಕ್ಕೆ ಓದಿ

12/08/2021, 08:32

ಮಂಗಳೂರು(reporterkarnataka.com): ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಸ್ಟ್ 12ರಂದು ಮಂಗಳೂರಿಗೆ ಆಗಮಿಸುವರು. ಸಿಎಂ ಆದ ಬಳಿಕ ಇದು ಅವರ ಮೊದಲ ಭೇಟಿಯಾಗಿದೆ.

ಮುಖ್ಯಮಂತ್ರಿಯವರು 12ರಂದು ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದಲ್ಲಿ ಮಂಗಳೂರಿಗೆ 10.50ಕ್ಕೆ ಆಗಮಿಸುವರು. ರಸ್ತೆಯ ಮೂಲಕ 11.20ಕ್ಕೆ ಜಿಲ್ಲಾ ಪಂಚಾಯಿತಿ ಕಚೇರಿಗೆ ತಲುಪುವರು. 11.30ಕ್ಕೆ ಕೋವಿಡ್ 19 ಕುರಿತಂತೆ ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸುವರು. ಈ ಮಧ್ಯೆ ವೆನ್ಲಾಕ್ ನಲ್ಲಿ 36 ಬೆಡ್ ನ ಐಸಿಯು ವಿಭಾಗವನ್ನು ಉದ್ಘಾಟಿಸುವರು. ಉರ್ವ ಸಮೀಪದ ಅಂಬೇಡ್ಕರ್ ಭವನವನ್ನು ಕೂಡ ಉದ್ಘಾಟಿಸುವ ಕಾರ್ಯಕ್ರಮವಿದೆ.

ಮಧ್ಯಾಹ್ನ 2.30ಕ್ಕೆ ರಸ್ತೆ ಮೂಲಕ ಉಡುಪಿಗೆ ಭೇಟಿ ನೀಡುವರು. ಸಂಜೆ 4 ಗಂಟೆಗೆ ಉಡುಪಿ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಕುರಿತು ಉಡುಪಿ ಜಿಪಂ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸುವರು. ರಾತ್ರಿ 8 ಗಂಟೆಗೆ ಮಂಗಳೂರಿಗೆ ಆಗಮುಸಿ ವಾಸ್ತವ್ಯ ಹೂಡುವರು.

ಇತ್ತೀಚಿನ ಸುದ್ದಿ

ಜಾಹೀರಾತು