4:18 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

ನೆರೆಹಾವಳಿ ಹಾನಿ ತಪ್ಪಿಸಲು ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಿ: ಮುಖ್ಯಮಂತ್ರಿ ಯಡಿಯೂರಪ್ಪ 

20/06/2021, 07:45

ಮಂಗಳೂರು(reporterkarnataka news): ಮಳೆಯಿಂದ ಉಂಟಾಗುವ ನೆರೆ, ಪ್ರವಾಹ ಸಮಯದಲ್ಲಿ ಅನಾಹುತದಿಂದ ಸಾವು ನೋವು ಉಂಟಾಗದಂತೆ ಜಿಲ್ಲಾಡಳಿತ ನೋಡಿಕೊಳ್ಳಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚನೆ ನೀಡಿದರು.
ಅವರು ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಪೋಲಿಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳೊಂದಿಗೆ ವಿಪತ್ತು ನಿರ್ವಹಣೆ ಕಾರ್ಯಗಳನ್ನು ಕೈಗೊಳ್ಳುವ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡುತ್ತಿದ್ದರು.
ರಾಜ್ಯದ ಕೆಲವು ಜಿಲ್ಲೆಗಳು ಕಳೆದ ಮೂರು ವರ್ಷಗಳಿಂದ ಒಂದಲ್ಲ ಒಂದು ರೀತಿಯಲ್ಲಿ ಪ್ರವಾಹ ಹಾಗೂ ಭೂಕುಸಿತ ಉಂಟಾಗಿ, ಸಂಕಷ್ಟ ಎದುರಿಸುತ್ತಿದ್ದೇವೆ. ಆದ್ದರಿಂದ ಇಂತಹ ಹಾನಿಯನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚಿಸಿದರು. 


 ಈಗಾಗಲೇ ನಾಲ್ಕು ಜಿಲ್ಲೆಗಳಿಗೆ ಎನ್‍ಡಿಆರ್‍ಎಫ್ ತಂಡಗಳನ್ನು ಕಳುಹಿಸಲಾಗಿದೆ. ಪ್ರಾಕೃತಿಕ ವಿಕೋಪ ಎದುರಿಸಲು ಎಲ್ಲಾ ರೀತಿಯ ಸನ್ನದ್ದು ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಿರ್ದೇಶನ ನೀಡಿದರು.  
ಅಗತ್ಯವಿರುವೆಡೆ  ಪರಿಹಾರ ಕೇಂದ್ರಗಳನ್ನು ತೆರೆದು ಸ್ಥಳಾಂತರಿಸುವುದು, ವೈದ್ಯಕೀಯ ಸವಲತ್ತು ಕಲ್ಪಿಸುವುದು, ಸಂಪನ್ಮೂಲಗಳನ್ನು ಕ್ರೋಢೀಕರಣ ಮಾಡಿಕೊಳ್ಳುವುದು ಮತ್ತಿತರ ಅಗತ್ಯ ತಯಾರಿ ಇರಬೇಕು. ಯಾವುದೇ ರೀತಿಯ ಹಾನಿ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಅತ್ಯಂತ ಅಗತ್ಯ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಜಿಲ್ಲೆಯಲ್ಲಿ ಈಗಾಗಲೇ ವಿಪತ್ತು ಕಾರ್ಯಗಳನ್ನು ಕೈಗೊಳ್ಳಲು ತಂಡಗಳು ಹಾಗೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡುವುದರ  ಜೊತೆಗೆ ಪೂರ್ವಭಾವಿ ಸಭೆಗಳನ್ನು ಮಾಡಿ ಅವರುಗಳಿಗೆ ಮಾರ್ಗದರ್ಶನ ನೀಡಲಾಗಿದೆ ಎಂದರು.
 ನೆರೆಯಿಂದ ಜಿಲ್ಲೆಯ ಸಸಿಹಿತ್ಲು ಉಳ್ಳಾಲ ಸೋಮೇಶ್ವರ ಸೇರಿದಂತೆ ಮತ್ತಿತರ ಪ್ರದೇಶಗಳಲ್ಲಿ ಕಡಲಕೊರೆತೆ ಉಂಟಾಗಿದೆ ಎಂದ ಅವರು ಕಡಲಕೊರೆತ ನಿವಾರಣೆಗೆ ತಡೆಗೋಡೆಗಳನ್ನು ನಿರ್ಮಾಣ ಮಾಡುವ ಕಾರ್ಯಗಳು ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ಕಳೆದ ತಿಂಗಳು ಕಂದಾಯ ಸಚಿವರು ನೆರೆ ವೀಕ್ಷಣೆಗೆ ಬಂದ ಸಂದರ್ಭದಲ್ಲಿ ಇವುಗಳ ಸ್ಥಳ ಭೇಟಿ ಮಾಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ತಿಳಿಸಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು