11:40 PM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಪಾಕಿಸ್ತಾನಕ್ಕೆ ಅಕ್ರಮ ಟ್ರಮಡಾಲ್ ಡ್ರಗ್‌ ರಫ್ತು: ಬೆಂಗಳೂರಿನ 4 ಮಂದಿ ಬಂಧನ; ಎನ್ ಸಿಬಿ ಕಾರ್ಯಾಚರಣೆ

20/03/2022, 15:58

ಬೆಂಗಳೂರು(reporterkarnataka.com): ಟ್ರಮಡಾಲ್ ನೋವು ನಿವಾರಕ ಔಷಧಿಗಳನ್ನು ಅನಧಿಕೃತವಾಗಿ ನೆರೆಯ ಪಾಕಿಸ್ತಾನಕ್ಕೆ ರಫ್ತು ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ನಾಲ್ವರನ್ನು ಬಂಧಿಸಲಾಗಿದೆ.

ಬೆಂಗಳೂರು ವಲಯದ ಮಾದಕ ವಸ್ತು ನಿಯಂತ್ರಣ ದಳ(NCB ) ಅಧಿಕಾರಿಗಳು ತೆಲಂಗಾಣ ಮೂಲದ ಲ್ಯೂಸೆಂಟ್ ಡ್ರಗ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ, ಉದ್ಯಮಿ ಸೇರಿದಂತೆ ನಾಲ್ವರನ್ನು ಬೆಂಗಳೂರಿನಲ್ಲಿ ತಮ್ಮ ವಶಕ್ಕೆ ಪಡೆದಿದ್ದಾರೆ. ತೆಲಂಗಾಣದಲ್ಲಿರುವ ಈ ಕಂಪನಿಯು ಯಾವುದೇ ಪರವಾನಗಿ ಇಲ್ಲದೆ ಪಾಕಿಸ್ತಾನಕ್ಕೆ ವಾರ್ಷಿಕವಾಗಿ 25 ಸಾವಿರ ಕೆ‌ಜಿ ಟ್ರಮಡಾಲ್ ಡ್ರಗ್ ರಫ್ತು ಮಾಡುತ್ತಿತ್ತು. ಡೆನ್ಮಾರ್ಕ್, ಜರ್ಮನಿ, ಮಲೇಷ್ಯಾಗೂ ಈ ಔಷಧಿಯನ್ನು ರಫ್ತು ಮಾಡುತ್ತಿತ್ತು. ಹೀಗಾಗಿ ಈ ಸಂಬಂಧ ದಾಖಲಾಗಿದ್ದ ದೂರಿನ ಮೇರೆಗೆ ದಾಳಿ ನಡೆಸಿದ ಎನ್ ಸಿಬಿ ಅಧಿಕಾರಿಗಳು ಫಾರ್ಮಾ ಮುಖ್ಯಸ್ಥ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು