11:10 AM Saturday23 - May 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ…

ಇತ್ತೀಚಿನ ಸುದ್ದಿ

ಪಾಕಿಸ್ತಾನಕ್ಕೆ ಅಕ್ರಮ ಟ್ರಮಡಾಲ್ ಡ್ರಗ್‌ ರಫ್ತು: ಬೆಂಗಳೂರಿನ 4 ಮಂದಿ ಬಂಧನ; ಎನ್ ಸಿಬಿ ಕಾರ್ಯಾಚರಣೆ

20/03/2022, 15:58

ಬೆಂಗಳೂರು(reporterkarnataka.com): ಟ್ರಮಡಾಲ್ ನೋವು ನಿವಾರಕ ಔಷಧಿಗಳನ್ನು ಅನಧಿಕೃತವಾಗಿ ನೆರೆಯ ಪಾಕಿಸ್ತಾನಕ್ಕೆ ರಫ್ತು ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ನಾಲ್ವರನ್ನು ಬಂಧಿಸಲಾಗಿದೆ.

ಬೆಂಗಳೂರು ವಲಯದ ಮಾದಕ ವಸ್ತು ನಿಯಂತ್ರಣ ದಳ(NCB ) ಅಧಿಕಾರಿಗಳು ತೆಲಂಗಾಣ ಮೂಲದ ಲ್ಯೂಸೆಂಟ್ ಡ್ರಗ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ, ಉದ್ಯಮಿ ಸೇರಿದಂತೆ ನಾಲ್ವರನ್ನು ಬೆಂಗಳೂರಿನಲ್ಲಿ ತಮ್ಮ ವಶಕ್ಕೆ ಪಡೆದಿದ್ದಾರೆ. ತೆಲಂಗಾಣದಲ್ಲಿರುವ ಈ ಕಂಪನಿಯು ಯಾವುದೇ ಪರವಾನಗಿ ಇಲ್ಲದೆ ಪಾಕಿಸ್ತಾನಕ್ಕೆ ವಾರ್ಷಿಕವಾಗಿ 25 ಸಾವಿರ ಕೆ‌ಜಿ ಟ್ರಮಡಾಲ್ ಡ್ರಗ್ ರಫ್ತು ಮಾಡುತ್ತಿತ್ತು. ಡೆನ್ಮಾರ್ಕ್, ಜರ್ಮನಿ, ಮಲೇಷ್ಯಾಗೂ ಈ ಔಷಧಿಯನ್ನು ರಫ್ತು ಮಾಡುತ್ತಿತ್ತು. ಹೀಗಾಗಿ ಈ ಸಂಬಂಧ ದಾಖಲಾಗಿದ್ದ ದೂರಿನ ಮೇರೆಗೆ ದಾಳಿ ನಡೆಸಿದ ಎನ್ ಸಿಬಿ ಅಧಿಕಾರಿಗಳು ಫಾರ್ಮಾ ಮುಖ್ಯಸ್ಥ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು