2:37 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಪಾಲಿಕೆ: 500 ಚ.ಮೀ. ವಿಸ್ತೀರ್ಣವರೆಗಿನ ಎಲ್ಲ ವಾಸ್ತವ್ಯ, ವಾಣಿಜ್ಯ ಕಟ್ಟಡಗಳ ಪರವಾನಿಗೆ, ಪ್ರವೇಶ ಪತ್ರಗಳ ಮಂಜೂರಾತಿ ಅಧಿಕಾರ ವಲಯ ಕಚೇರಿಗೆ

19/08/2023, 09:44

ಮಂಗಳೂರು(reporterkarnataka.com): ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ 500 ಚ.ಮೀ ವಿಸ್ತೀರ್ಣವರೆಗಿನ ಎಲ್ಲ ವಾಸ್ತವ್ಯ, ವಾಣಿಜ್ಯ ಮತ್ತು ಇತರ ಉದ್ದೇಶದ ಕಟ್ಟಡಗಳಿಗೆ ಪರವಾನಿಗೆ, ಪ್ರವೇಶ ಪತ್ರಗಳ ಮಂಜೂರಾತಿ ಹಾಗೂ ಪರವಾನಿಗೆ ನವೀಕರಣ ಹಾಗೂ ಕಟ್ಟಡ ದುರಸ್ತಿ ಸಂಬಂಧಪಟ್ಟ ಎಲ್ಲ ಕಡತಗಳನ್ನು ಆಯಾಯ ವಲಯ ಕಚೇರಿ ಹಂತದಲ್ಲಿ ಮುಕ್ತಾಯಗೊಳಿಸಲು ಆದೇಶ ಹೊರಡಿಸಲಾಗಿದೆ.
ಇನ್ನು ಮುಂದೆ ಸಲ್ಲಿಕೆಯಾಗುವ ಅರ್ಜಿಗಳನ್ನು ವಲಯ ಹಂತದಲ್ಲಿ ಸ್ವೀಕರಿಸಿ ಸಹಾಯಕ ನಗರ ಯೋಜನಾಧಿಕಾರಿಯವರ ವರದಿ ಆಧಾರದ ಮೇಲೆ ವಲಯ ಆಯುಕ್ತರಿಗೆ ಮಂಜೂರಾತಿಗೊಳಿಸುವ ಅಧಿಕಾರವನ್ನು ನೀಡಿ ಆದೇಶಿಸಲಾಗಿದೆ. ಅದರಂತೆ ಮೇಲ್ಕಂಡ ವಿಸ್ತೀರ್ಣಗೊಳಪಟ್ಟ ಕಡತಗಳನ್ನು 15 ದಿನಗಳ ಕಾಲಮಿತಿಯೊಳಗೆ ಹಾಗೂ ಸರ್ಕಾರದಿಂದ ಜಾರಿಗೆ ತಂದಿರುವ ನಿರ್ಮಾಣ್ 2 ಆನ್‍ಲೈನ್ ತಂತ್ರಾಂಶದ ಮೂಲಕವೇ ಕಡ್ಡಾಯವಾಗಿ ನಿರ್ವಹಿಸಲು ನಿರ್ದೇಶನ ನೀಡಲಾಗಿರುತ್ತದೆ. ಅಲ್ಲದೆ ಜಂಟಿ ನಿರ್ದೇಶಕರು (ನಗರ ಯೋಜನೆ) ಪ್ರತೀ ತಿಂಗಳು ಆ ಕಡತಗಳ ವಿಲೇವಾರಿ ಪ್ರಗತಿಯನ್ನು ಪರಿಶೀಲಿಸುವಂತೆ ನಿರ್ದೇಶನ ನೀಡಲಾಗಿದೆ.
ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ವಾಸ್ತವ್ಯ, ವಾಣಿಜ್ಯ ಮತ್ತು ಇತರೆ ಕಟ್ಟಡಗಳ ಪರವಾನಿಗೆ ಮತ್ತು ಪ್ರವೇಶ ಪತ್ರಗಳ ಮಂಜೂರಾತಿ ಕೆಲಸ ಕಾರ್ಯಗಳಿಗೆ ಸಂಬಂಧಿಸಿದಂತೆ 250 ಚ.ಮೀ ವೀಸ್ತೀರ್ಣಕ್ಕೆ ಮೇಲ್ಪಟ್ಟ ಎಲ್ಲಾ ಕಡತಗಳು ಆಯುಕ್ತರ ಮಂಜೂರಾತಿಗಾಗಿ ಕೇಂದ್ರ ಕಚೇರಿಗೆ ಸಲ್ಲಿಸಬೇಕಾದ ವ್ಯವಸ್ಥೆ ಇತ್ತು. ಅದನ್ನು ಗಮನಿಸಿ ಈ ವ್ಯವಸ್ಥೆಯಲ್ಲಿನ ಕಡತಗಳ ಚಲನೆ ಹಾಗೂ ನಿರ್ವಹಣೆ ಬಗ್ಗೆ ಸಮರ್ಪಕವಾಗಿ ವಿಶ್ಲೇಷಿಸಿ, ಈ ಪದ್ದತಿಯಲ್ಲಿ ಕಂಡುಬಂದ ನ್ಯೂನ್ಯತೆಗಳಿಂದ ಸಾರ್ವಜನಿಕರಿಗೆ ಉಂಟಾಗುತ್ತಿದ್ದ ತೊಂದರೆಗಳನ್ನು ಪರಿಹರಿಸುವ ಉದ್ದೇಶದಿಂದ, ಈ ವ್ಯವಸ್ಥೆಯನ್ನು ಸರಳೀಕರಣಗೊಳಿಸಲು ಕ್ರಮವಹಿಸಲಾಗಿದೆ.
ಅದರಂತೆ ಈ ಆದೇಶ ಹೊರಡಿಸಲಾಗಿದೆ. ಕಟ್ಟಡ ನಿರ್ಮಾಣ ಪರವಾನಿಗೆ ಮತ್ತು ಪ್ರವೇಶ ಪತ್ರಗಳಿಗೆ ಸಂಬಂಧಪಟ್ಟಂತೆ ಪ್ರತೀ ತಿಂಗಳು ಸರಾಸರಿ 150 ಅರ್ಜಿಗಳು ಸ್ವೀಕೃತವಾಗುತ್ತಿದ್ದು, ಈ ವ್ಯವಸ್ಥೆ ಜಾರಿಗೆ ತಂದ ಹಿನ್ನಲೆಯಲ್ಲಿ ಇನ್ನು ಮುಂದೆ ಕಟ್ಟಡ ನಿರ್ಮಾಣದಾರರು ಕೇಂದ್ರ ಕಚೇರಿಗೆ ಆಗಮಿಸಬೇಕಾದ ಅವಶ್ಯಕತೆಯಿಲ್ಲದೆ ನೇರವಾಗಿ ವಲಯ ಕಚೇರಿಯಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು