4:06 AM Thursday18 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

ಪಾಲಿಕೆ: 500 ಚ.ಮೀ. ವಿಸ್ತೀರ್ಣವರೆಗಿನ ಎಲ್ಲ ವಾಸ್ತವ್ಯ, ವಾಣಿಜ್ಯ ಕಟ್ಟಡಗಳ ಪರವಾನಿಗೆ, ಪ್ರವೇಶ ಪತ್ರಗಳ ಮಂಜೂರಾತಿ ಅಧಿಕಾರ ವಲಯ ಕಚೇರಿಗೆ

19/08/2023, 09:44

ಮಂಗಳೂರು(reporterkarnataka.com): ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ 500 ಚ.ಮೀ ವಿಸ್ತೀರ್ಣವರೆಗಿನ ಎಲ್ಲ ವಾಸ್ತವ್ಯ, ವಾಣಿಜ್ಯ ಮತ್ತು ಇತರ ಉದ್ದೇಶದ ಕಟ್ಟಡಗಳಿಗೆ ಪರವಾನಿಗೆ, ಪ್ರವೇಶ ಪತ್ರಗಳ ಮಂಜೂರಾತಿ ಹಾಗೂ ಪರವಾನಿಗೆ ನವೀಕರಣ ಹಾಗೂ ಕಟ್ಟಡ ದುರಸ್ತಿ ಸಂಬಂಧಪಟ್ಟ ಎಲ್ಲ ಕಡತಗಳನ್ನು ಆಯಾಯ ವಲಯ ಕಚೇರಿ ಹಂತದಲ್ಲಿ ಮುಕ್ತಾಯಗೊಳಿಸಲು ಆದೇಶ ಹೊರಡಿಸಲಾಗಿದೆ.
ಇನ್ನು ಮುಂದೆ ಸಲ್ಲಿಕೆಯಾಗುವ ಅರ್ಜಿಗಳನ್ನು ವಲಯ ಹಂತದಲ್ಲಿ ಸ್ವೀಕರಿಸಿ ಸಹಾಯಕ ನಗರ ಯೋಜನಾಧಿಕಾರಿಯವರ ವರದಿ ಆಧಾರದ ಮೇಲೆ ವಲಯ ಆಯುಕ್ತರಿಗೆ ಮಂಜೂರಾತಿಗೊಳಿಸುವ ಅಧಿಕಾರವನ್ನು ನೀಡಿ ಆದೇಶಿಸಲಾಗಿದೆ. ಅದರಂತೆ ಮೇಲ್ಕಂಡ ವಿಸ್ತೀರ್ಣಗೊಳಪಟ್ಟ ಕಡತಗಳನ್ನು 15 ದಿನಗಳ ಕಾಲಮಿತಿಯೊಳಗೆ ಹಾಗೂ ಸರ್ಕಾರದಿಂದ ಜಾರಿಗೆ ತಂದಿರುವ ನಿರ್ಮಾಣ್ 2 ಆನ್‍ಲೈನ್ ತಂತ್ರಾಂಶದ ಮೂಲಕವೇ ಕಡ್ಡಾಯವಾಗಿ ನಿರ್ವಹಿಸಲು ನಿರ್ದೇಶನ ನೀಡಲಾಗಿರುತ್ತದೆ. ಅಲ್ಲದೆ ಜಂಟಿ ನಿರ್ದೇಶಕರು (ನಗರ ಯೋಜನೆ) ಪ್ರತೀ ತಿಂಗಳು ಆ ಕಡತಗಳ ವಿಲೇವಾರಿ ಪ್ರಗತಿಯನ್ನು ಪರಿಶೀಲಿಸುವಂತೆ ನಿರ್ದೇಶನ ನೀಡಲಾಗಿದೆ.
ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ವಾಸ್ತವ್ಯ, ವಾಣಿಜ್ಯ ಮತ್ತು ಇತರೆ ಕಟ್ಟಡಗಳ ಪರವಾನಿಗೆ ಮತ್ತು ಪ್ರವೇಶ ಪತ್ರಗಳ ಮಂಜೂರಾತಿ ಕೆಲಸ ಕಾರ್ಯಗಳಿಗೆ ಸಂಬಂಧಿಸಿದಂತೆ 250 ಚ.ಮೀ ವೀಸ್ತೀರ್ಣಕ್ಕೆ ಮೇಲ್ಪಟ್ಟ ಎಲ್ಲಾ ಕಡತಗಳು ಆಯುಕ್ತರ ಮಂಜೂರಾತಿಗಾಗಿ ಕೇಂದ್ರ ಕಚೇರಿಗೆ ಸಲ್ಲಿಸಬೇಕಾದ ವ್ಯವಸ್ಥೆ ಇತ್ತು. ಅದನ್ನು ಗಮನಿಸಿ ಈ ವ್ಯವಸ್ಥೆಯಲ್ಲಿನ ಕಡತಗಳ ಚಲನೆ ಹಾಗೂ ನಿರ್ವಹಣೆ ಬಗ್ಗೆ ಸಮರ್ಪಕವಾಗಿ ವಿಶ್ಲೇಷಿಸಿ, ಈ ಪದ್ದತಿಯಲ್ಲಿ ಕಂಡುಬಂದ ನ್ಯೂನ್ಯತೆಗಳಿಂದ ಸಾರ್ವಜನಿಕರಿಗೆ ಉಂಟಾಗುತ್ತಿದ್ದ ತೊಂದರೆಗಳನ್ನು ಪರಿಹರಿಸುವ ಉದ್ದೇಶದಿಂದ, ಈ ವ್ಯವಸ್ಥೆಯನ್ನು ಸರಳೀಕರಣಗೊಳಿಸಲು ಕ್ರಮವಹಿಸಲಾಗಿದೆ.
ಅದರಂತೆ ಈ ಆದೇಶ ಹೊರಡಿಸಲಾಗಿದೆ. ಕಟ್ಟಡ ನಿರ್ಮಾಣ ಪರವಾನಿಗೆ ಮತ್ತು ಪ್ರವೇಶ ಪತ್ರಗಳಿಗೆ ಸಂಬಂಧಪಟ್ಟಂತೆ ಪ್ರತೀ ತಿಂಗಳು ಸರಾಸರಿ 150 ಅರ್ಜಿಗಳು ಸ್ವೀಕೃತವಾಗುತ್ತಿದ್ದು, ಈ ವ್ಯವಸ್ಥೆ ಜಾರಿಗೆ ತಂದ ಹಿನ್ನಲೆಯಲ್ಲಿ ಇನ್ನು ಮುಂದೆ ಕಟ್ಟಡ ನಿರ್ಮಾಣದಾರರು ಕೇಂದ್ರ ಕಚೇರಿಗೆ ಆಗಮಿಸಬೇಕಾದ ಅವಶ್ಯಕತೆಯಿಲ್ಲದೆ ನೇರವಾಗಿ ವಲಯ ಕಚೇರಿಯಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು