2:40 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಪಂಜಾಬ್‌: ಆಪರೇಶನ್ ಕಮಲ ಸಂಚಿಗೆ ರಾಜ್ಯಪಾಲರ ಸಾಥ್: ಆಮ್ ಆದ್ಮಿ ಪಾರ್ಟಿ ಆರೋಪ

25/09/2022, 13:38

ಚಂಡೀಗಢ(reporterkarnataka.com),: ಪಂಜಾಬ್‌ನಲ್ಲಿ ಆಪರೇಶನ್ ಕಮಲ ನಡೆಸಲು ಸಂಚು ಹೂಡಿರುವ ಬಿಜೆಪಿಯ ಅಣತಿಯಂತೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ನಡೆದುಕೊಳ್ಳುತ್ತಿದ್ದಾರೆಂದು ಭಗವಂತ ಮಾನ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಸರಕಾರ ಆರೋಪಿಸಿದೆ.

ಬಿಜೆಪಿಯು ಅಧಿಕಾರದಲ್ಲಿರದ ರಾಜ್ಯಗಳಲ್ಲಿ ವಿರೋಧ ಪಕ್ಷವಾಗಿ ವರ್ತಿಸುವ ಹಾಗೂ ಆಡಳಿತಾರೂಢ ಸರಕಾರವು ಕೆಲಸ ಮಾಡದಂತೆ ತಡೆಯುವ ಅದರ ಅಜೆಂಡಾವನ್ನು ಜಾರಿಗೊಳಿಸುವ ಹೊಣೆಯನ್ನು ರಾಜ್ಯಪಾಲರಿಗೆ ವಹಿಸಲಾಗಿದೆ ಎಂದು ಪಂಜಾಬ್‌ನ ಇಂಧನ ಸಚಿವ ಅಮಾನ್ ಆರೋರಾ ಆರೋಪಿಸಿದ್ದಾರೆ. ಪಂಜಾಬ್‌ನ ಆಪ್ ಸರಕಾಕ್ಕೆ ರಾಜ್ಯಪಾಲರು ಕಳುಹಿಸಿರುವ ನೋಟಿಸ್‌ಗಳು, ಭಾರತದ ಸಂವಿಧಾನಕ್ಕೆ ಅನುಗುಣವಾಗಿ ಸರಕಾರವು ಕಾರ್ಯಾಚರಿಸುವುದಕ್ಕೆ ತಡೆಯೊಡ್ಡಿವೆ ಎಂದವರು ಆರೋಪಿಸಿದರು.

“ಕಳೆದ 75 ವರ್ಷಗಳಲ್ಲಿ ಯಾವುದೇ ರಾಷ್ಟ್ರಪತಿಯವರಾಗಲಿ ಅಥವಾ ರಾಜ್ಯಪಾಲರಾಗಲಿ, ಅಧಿವೇಶವನ್ನು ಕರೆಯುವುದಕ್ಕೆ ಮುನ್ನ ಶಾಸನಸಭೆಯ ಕಲಾಪಗಳ ಪಟ್ಟಿಯನ್ನು ನೀಡುವಂತೆ ಕೇಳಿರಲಿಲ್ಲ. ಆದರೆ ಈಗ ಇದೇ ಮೊದಲ ಬಾರಿಗೆ ಇದು ನಡೆದಿದೆ. ಯಾಕೆಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಆಮ್ ಆದ್ಮಿ ಸರಕಾರವು ಶ್ರಮಿಸುವುದನ್ನು ತಡೆಗಟ್ಟಲು ಪಂಜಾಬ್‌ನ ರಾಜ್ಯಪಾಲರು ಬಿಜೆಪಿ ಹಾಗೂ ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ” ಎಂದು ಆಮನ್ ಆರೋರಾ ಆರೋಪಿಸಿದರು.

ಇತ್ತೀಚೆಗೆ ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ಮುಖ್ಯಮಂತ್ರಿ ಭಗವಂತ ಮಾನ್ ಅವರಿಗೆ ಪತ್ರವೊಂದನ್ನು ಬರೆದು, ಸರಕಾರದ ಕಾನೂನು ಸಲಹೆಗಾರರು ತನಗೆ ಸಮರ್ಪಕವಾಗಿ ವಿವರಣೆಗಳನ್ನು ನೀಡುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ದಿಲ್ಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರು ಆಪ್ ಸರಕಾರವು ಕಾರ್ಯನಿರ್ವಹಿಸದಂತೆ ತಡೆಯುತ್ತಿದ್ದರೆ, ಪಂಜಾಬ್‌ನಲ್ಲಿ ಈ ಕೆಲಸವನ್ನು ಬಿಜೆಪಿಯು ರಾಜ್ಯಪಾಲರಿಗೆ ವಹಿಸಿದೆ. ಆಪ್‌ನ ಜನಪ್ರಿಯತೆಯಿಂದ ಅವರು ಹೆದರಿಕೊಂಡಿದ್ದಾರೆ. ಆಮ್ ಆದ್ಮಿ ಪಕ್ಷವು ಜನತೆಯ ಪರವಾದ ವಿಷಯಗಳನ್ನು ಪ್ರಸ್ತಾವಿಸದಂತೆ ತಡೆಯಲು ಬಿಜೆಪಿಯು ಎಲ್ಲಾ ವಿಧಾನಗಳನ್ನು ಅನುಸರಿಸುತ್ತಿದೆ ಎಂದವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು