12:15 PM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಪಂಜಾಬ್‌: ಆಪರೇಶನ್ ಕಮಲ ಸಂಚಿಗೆ ರಾಜ್ಯಪಾಲರ ಸಾಥ್: ಆಮ್ ಆದ್ಮಿ ಪಾರ್ಟಿ ಆರೋಪ

25/09/2022, 13:38

ಚಂಡೀಗಢ(reporterkarnataka.com),: ಪಂಜಾಬ್‌ನಲ್ಲಿ ಆಪರೇಶನ್ ಕಮಲ ನಡೆಸಲು ಸಂಚು ಹೂಡಿರುವ ಬಿಜೆಪಿಯ ಅಣತಿಯಂತೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ನಡೆದುಕೊಳ್ಳುತ್ತಿದ್ದಾರೆಂದು ಭಗವಂತ ಮಾನ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಸರಕಾರ ಆರೋಪಿಸಿದೆ.

ಬಿಜೆಪಿಯು ಅಧಿಕಾರದಲ್ಲಿರದ ರಾಜ್ಯಗಳಲ್ಲಿ ವಿರೋಧ ಪಕ್ಷವಾಗಿ ವರ್ತಿಸುವ ಹಾಗೂ ಆಡಳಿತಾರೂಢ ಸರಕಾರವು ಕೆಲಸ ಮಾಡದಂತೆ ತಡೆಯುವ ಅದರ ಅಜೆಂಡಾವನ್ನು ಜಾರಿಗೊಳಿಸುವ ಹೊಣೆಯನ್ನು ರಾಜ್ಯಪಾಲರಿಗೆ ವಹಿಸಲಾಗಿದೆ ಎಂದು ಪಂಜಾಬ್‌ನ ಇಂಧನ ಸಚಿವ ಅಮಾನ್ ಆರೋರಾ ಆರೋಪಿಸಿದ್ದಾರೆ. ಪಂಜಾಬ್‌ನ ಆಪ್ ಸರಕಾಕ್ಕೆ ರಾಜ್ಯಪಾಲರು ಕಳುಹಿಸಿರುವ ನೋಟಿಸ್‌ಗಳು, ಭಾರತದ ಸಂವಿಧಾನಕ್ಕೆ ಅನುಗುಣವಾಗಿ ಸರಕಾರವು ಕಾರ್ಯಾಚರಿಸುವುದಕ್ಕೆ ತಡೆಯೊಡ್ಡಿವೆ ಎಂದವರು ಆರೋಪಿಸಿದರು.

“ಕಳೆದ 75 ವರ್ಷಗಳಲ್ಲಿ ಯಾವುದೇ ರಾಷ್ಟ್ರಪತಿಯವರಾಗಲಿ ಅಥವಾ ರಾಜ್ಯಪಾಲರಾಗಲಿ, ಅಧಿವೇಶವನ್ನು ಕರೆಯುವುದಕ್ಕೆ ಮುನ್ನ ಶಾಸನಸಭೆಯ ಕಲಾಪಗಳ ಪಟ್ಟಿಯನ್ನು ನೀಡುವಂತೆ ಕೇಳಿರಲಿಲ್ಲ. ಆದರೆ ಈಗ ಇದೇ ಮೊದಲ ಬಾರಿಗೆ ಇದು ನಡೆದಿದೆ. ಯಾಕೆಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಆಮ್ ಆದ್ಮಿ ಸರಕಾರವು ಶ್ರಮಿಸುವುದನ್ನು ತಡೆಗಟ್ಟಲು ಪಂಜಾಬ್‌ನ ರಾಜ್ಯಪಾಲರು ಬಿಜೆಪಿ ಹಾಗೂ ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ” ಎಂದು ಆಮನ್ ಆರೋರಾ ಆರೋಪಿಸಿದರು.

ಇತ್ತೀಚೆಗೆ ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ಮುಖ್ಯಮಂತ್ರಿ ಭಗವಂತ ಮಾನ್ ಅವರಿಗೆ ಪತ್ರವೊಂದನ್ನು ಬರೆದು, ಸರಕಾರದ ಕಾನೂನು ಸಲಹೆಗಾರರು ತನಗೆ ಸಮರ್ಪಕವಾಗಿ ವಿವರಣೆಗಳನ್ನು ನೀಡುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ದಿಲ್ಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರು ಆಪ್ ಸರಕಾರವು ಕಾರ್ಯನಿರ್ವಹಿಸದಂತೆ ತಡೆಯುತ್ತಿದ್ದರೆ, ಪಂಜಾಬ್‌ನಲ್ಲಿ ಈ ಕೆಲಸವನ್ನು ಬಿಜೆಪಿಯು ರಾಜ್ಯಪಾಲರಿಗೆ ವಹಿಸಿದೆ. ಆಪ್‌ನ ಜನಪ್ರಿಯತೆಯಿಂದ ಅವರು ಹೆದರಿಕೊಂಡಿದ್ದಾರೆ. ಆಮ್ ಆದ್ಮಿ ಪಕ್ಷವು ಜನತೆಯ ಪರವಾದ ವಿಷಯಗಳನ್ನು ಪ್ರಸ್ತಾವಿಸದಂತೆ ತಡೆಯಲು ಬಿಜೆಪಿಯು ಎಲ್ಲಾ ವಿಧಾನಗಳನ್ನು ಅನುಸರಿಸುತ್ತಿದೆ ಎಂದವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು