5:00 AM Wednesday10 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ…

ಇತ್ತೀಚಿನ ಸುದ್ದಿ

ಪಂಜಾಬ್‌: ಆಪರೇಶನ್ ಕಮಲ ಸಂಚಿಗೆ ರಾಜ್ಯಪಾಲರ ಸಾಥ್: ಆಮ್ ಆದ್ಮಿ ಪಾರ್ಟಿ ಆರೋಪ

25/09/2022, 13:38

ಚಂಡೀಗಢ(reporterkarnataka.com),: ಪಂಜಾಬ್‌ನಲ್ಲಿ ಆಪರೇಶನ್ ಕಮಲ ನಡೆಸಲು ಸಂಚು ಹೂಡಿರುವ ಬಿಜೆಪಿಯ ಅಣತಿಯಂತೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ನಡೆದುಕೊಳ್ಳುತ್ತಿದ್ದಾರೆಂದು ಭಗವಂತ ಮಾನ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಸರಕಾರ ಆರೋಪಿಸಿದೆ.

ಬಿಜೆಪಿಯು ಅಧಿಕಾರದಲ್ಲಿರದ ರಾಜ್ಯಗಳಲ್ಲಿ ವಿರೋಧ ಪಕ್ಷವಾಗಿ ವರ್ತಿಸುವ ಹಾಗೂ ಆಡಳಿತಾರೂಢ ಸರಕಾರವು ಕೆಲಸ ಮಾಡದಂತೆ ತಡೆಯುವ ಅದರ ಅಜೆಂಡಾವನ್ನು ಜಾರಿಗೊಳಿಸುವ ಹೊಣೆಯನ್ನು ರಾಜ್ಯಪಾಲರಿಗೆ ವಹಿಸಲಾಗಿದೆ ಎಂದು ಪಂಜಾಬ್‌ನ ಇಂಧನ ಸಚಿವ ಅಮಾನ್ ಆರೋರಾ ಆರೋಪಿಸಿದ್ದಾರೆ. ಪಂಜಾಬ್‌ನ ಆಪ್ ಸರಕಾಕ್ಕೆ ರಾಜ್ಯಪಾಲರು ಕಳುಹಿಸಿರುವ ನೋಟಿಸ್‌ಗಳು, ಭಾರತದ ಸಂವಿಧಾನಕ್ಕೆ ಅನುಗುಣವಾಗಿ ಸರಕಾರವು ಕಾರ್ಯಾಚರಿಸುವುದಕ್ಕೆ ತಡೆಯೊಡ್ಡಿವೆ ಎಂದವರು ಆರೋಪಿಸಿದರು.

“ಕಳೆದ 75 ವರ್ಷಗಳಲ್ಲಿ ಯಾವುದೇ ರಾಷ್ಟ್ರಪತಿಯವರಾಗಲಿ ಅಥವಾ ರಾಜ್ಯಪಾಲರಾಗಲಿ, ಅಧಿವೇಶವನ್ನು ಕರೆಯುವುದಕ್ಕೆ ಮುನ್ನ ಶಾಸನಸಭೆಯ ಕಲಾಪಗಳ ಪಟ್ಟಿಯನ್ನು ನೀಡುವಂತೆ ಕೇಳಿರಲಿಲ್ಲ. ಆದರೆ ಈಗ ಇದೇ ಮೊದಲ ಬಾರಿಗೆ ಇದು ನಡೆದಿದೆ. ಯಾಕೆಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಆಮ್ ಆದ್ಮಿ ಸರಕಾರವು ಶ್ರಮಿಸುವುದನ್ನು ತಡೆಗಟ್ಟಲು ಪಂಜಾಬ್‌ನ ರಾಜ್ಯಪಾಲರು ಬಿಜೆಪಿ ಹಾಗೂ ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ” ಎಂದು ಆಮನ್ ಆರೋರಾ ಆರೋಪಿಸಿದರು.

ಇತ್ತೀಚೆಗೆ ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ಮುಖ್ಯಮಂತ್ರಿ ಭಗವಂತ ಮಾನ್ ಅವರಿಗೆ ಪತ್ರವೊಂದನ್ನು ಬರೆದು, ಸರಕಾರದ ಕಾನೂನು ಸಲಹೆಗಾರರು ತನಗೆ ಸಮರ್ಪಕವಾಗಿ ವಿವರಣೆಗಳನ್ನು ನೀಡುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ದಿಲ್ಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರು ಆಪ್ ಸರಕಾರವು ಕಾರ್ಯನಿರ್ವಹಿಸದಂತೆ ತಡೆಯುತ್ತಿದ್ದರೆ, ಪಂಜಾಬ್‌ನಲ್ಲಿ ಈ ಕೆಲಸವನ್ನು ಬಿಜೆಪಿಯು ರಾಜ್ಯಪಾಲರಿಗೆ ವಹಿಸಿದೆ. ಆಪ್‌ನ ಜನಪ್ರಿಯತೆಯಿಂದ ಅವರು ಹೆದರಿಕೊಂಡಿದ್ದಾರೆ. ಆಮ್ ಆದ್ಮಿ ಪಕ್ಷವು ಜನತೆಯ ಪರವಾದ ವಿಷಯಗಳನ್ನು ಪ್ರಸ್ತಾವಿಸದಂತೆ ತಡೆಯಲು ಬಿಜೆಪಿಯು ಎಲ್ಲಾ ವಿಧಾನಗಳನ್ನು ಅನುಸರಿಸುತ್ತಿದೆ ಎಂದವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು