4:17 AM Monday22 - December 2025
ಬ್ರೇಕಿಂಗ್ ನ್ಯೂಸ್
ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ

ಇತ್ತೀಚಿನ ಸುದ್ದಿ

ಪಂಜಾಬ್‌: ಆಪರೇಶನ್ ಕಮಲ ಸಂಚಿಗೆ ರಾಜ್ಯಪಾಲರ ಸಾಥ್: ಆಮ್ ಆದ್ಮಿ ಪಾರ್ಟಿ ಆರೋಪ

25/09/2022, 13:38

ಚಂಡೀಗಢ(reporterkarnataka.com),: ಪಂಜಾಬ್‌ನಲ್ಲಿ ಆಪರೇಶನ್ ಕಮಲ ನಡೆಸಲು ಸಂಚು ಹೂಡಿರುವ ಬಿಜೆಪಿಯ ಅಣತಿಯಂತೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ನಡೆದುಕೊಳ್ಳುತ್ತಿದ್ದಾರೆಂದು ಭಗವಂತ ಮಾನ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಸರಕಾರ ಆರೋಪಿಸಿದೆ.

ಬಿಜೆಪಿಯು ಅಧಿಕಾರದಲ್ಲಿರದ ರಾಜ್ಯಗಳಲ್ಲಿ ವಿರೋಧ ಪಕ್ಷವಾಗಿ ವರ್ತಿಸುವ ಹಾಗೂ ಆಡಳಿತಾರೂಢ ಸರಕಾರವು ಕೆಲಸ ಮಾಡದಂತೆ ತಡೆಯುವ ಅದರ ಅಜೆಂಡಾವನ್ನು ಜಾರಿಗೊಳಿಸುವ ಹೊಣೆಯನ್ನು ರಾಜ್ಯಪಾಲರಿಗೆ ವಹಿಸಲಾಗಿದೆ ಎಂದು ಪಂಜಾಬ್‌ನ ಇಂಧನ ಸಚಿವ ಅಮಾನ್ ಆರೋರಾ ಆರೋಪಿಸಿದ್ದಾರೆ. ಪಂಜಾಬ್‌ನ ಆಪ್ ಸರಕಾಕ್ಕೆ ರಾಜ್ಯಪಾಲರು ಕಳುಹಿಸಿರುವ ನೋಟಿಸ್‌ಗಳು, ಭಾರತದ ಸಂವಿಧಾನಕ್ಕೆ ಅನುಗುಣವಾಗಿ ಸರಕಾರವು ಕಾರ್ಯಾಚರಿಸುವುದಕ್ಕೆ ತಡೆಯೊಡ್ಡಿವೆ ಎಂದವರು ಆರೋಪಿಸಿದರು.

“ಕಳೆದ 75 ವರ್ಷಗಳಲ್ಲಿ ಯಾವುದೇ ರಾಷ್ಟ್ರಪತಿಯವರಾಗಲಿ ಅಥವಾ ರಾಜ್ಯಪಾಲರಾಗಲಿ, ಅಧಿವೇಶವನ್ನು ಕರೆಯುವುದಕ್ಕೆ ಮುನ್ನ ಶಾಸನಸಭೆಯ ಕಲಾಪಗಳ ಪಟ್ಟಿಯನ್ನು ನೀಡುವಂತೆ ಕೇಳಿರಲಿಲ್ಲ. ಆದರೆ ಈಗ ಇದೇ ಮೊದಲ ಬಾರಿಗೆ ಇದು ನಡೆದಿದೆ. ಯಾಕೆಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಆಮ್ ಆದ್ಮಿ ಸರಕಾರವು ಶ್ರಮಿಸುವುದನ್ನು ತಡೆಗಟ್ಟಲು ಪಂಜಾಬ್‌ನ ರಾಜ್ಯಪಾಲರು ಬಿಜೆಪಿ ಹಾಗೂ ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ” ಎಂದು ಆಮನ್ ಆರೋರಾ ಆರೋಪಿಸಿದರು.

ಇತ್ತೀಚೆಗೆ ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ಮುಖ್ಯಮಂತ್ರಿ ಭಗವಂತ ಮಾನ್ ಅವರಿಗೆ ಪತ್ರವೊಂದನ್ನು ಬರೆದು, ಸರಕಾರದ ಕಾನೂನು ಸಲಹೆಗಾರರು ತನಗೆ ಸಮರ್ಪಕವಾಗಿ ವಿವರಣೆಗಳನ್ನು ನೀಡುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ದಿಲ್ಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರು ಆಪ್ ಸರಕಾರವು ಕಾರ್ಯನಿರ್ವಹಿಸದಂತೆ ತಡೆಯುತ್ತಿದ್ದರೆ, ಪಂಜಾಬ್‌ನಲ್ಲಿ ಈ ಕೆಲಸವನ್ನು ಬಿಜೆಪಿಯು ರಾಜ್ಯಪಾಲರಿಗೆ ವಹಿಸಿದೆ. ಆಪ್‌ನ ಜನಪ್ರಿಯತೆಯಿಂದ ಅವರು ಹೆದರಿಕೊಂಡಿದ್ದಾರೆ. ಆಮ್ ಆದ್ಮಿ ಪಕ್ಷವು ಜನತೆಯ ಪರವಾದ ವಿಷಯಗಳನ್ನು ಪ್ರಸ್ತಾವಿಸದಂತೆ ತಡೆಯಲು ಬಿಜೆಪಿಯು ಎಲ್ಲಾ ವಿಧಾನಗಳನ್ನು ಅನುಸರಿಸುತ್ತಿದೆ ಎಂದವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು